ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ.
ಬೆಳಿಗ್ಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ ಪಕ್ಷದ ನಾಯಕರೊಬ್ಬರ ಮನೆಗೆ ಭೇಟಿ,ನಂತರ, ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ವಿವಾಹದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ, ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಡಳಿತ ಭವನ ಎದುರು ನಿರ್ಮಿಸಿರುವ ಡಿ.ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುವರು.
ಇದನ್ನು ಓದಿ: ಗ್ರೇಟರ್ ಬೆಂಗಳೂರು ಚುನಾವಣೆಗೆ ತಯಾರಿ ; ಉಸ್ತುವಾರಿ ಸಮಿತಿ ರಚಿಸಿದ ಎಚ್ಡಿಕೆ
ನಂತರ ನಗರಪಾಲಿಕೆ ವಲಯ ಕಚೇರಿ ಮೂರರಲ್ಲಿ ಗ್ರೇಟರ್ ಮೈಸೂರು ರಚನೆ ಕುರಿತು ಸಭೆ ನಡೆಸಲಿದ್ದಾರೆ. ನಂತರ,ಮಧ್ಯಾಹ್ನ ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ೪ಕ್ಕೆ, ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳಿಕ, ವಿಶ್ರಾಂತಿ ಪಡೆಯಲಿರುವ ಸಿಎಂ,ಸಂಜೆ ಹೋಟೆಲ್ ಸದರನ್ ಸ್ಟಾರ್ನಲ್ಲಿ ನಡೆಯಲಿರುವಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ,ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡವರು. ಮರುದಿನ ಬೆಂಗಳೂರಿಗೆ ತೆರಳುವರು ಎಂದು ತಿಳಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…