ಮೈಸೂರು

ನಾಳೆ ಮೈಸೂರಿಗೆ ಸಿಎಂ : ಗ್ರೇಟರ್‌ ಮೈಸೂರು ರಚನೆ ಕುರಿತು ಸಭೆ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ.

ಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ ಪಕ್ಷದ ನಾಯಕರೊಬ್ಬರ ಮನೆಗೆ ಭೇಟಿ,ನಂತರ, ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ವಿವಾಹದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ, ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಡಳಿತ ಭವನ ಎದುರು ನಿರ್ಮಿಸಿರುವ ಡಿ.ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುವರು.

ಇದನ್ನು ಓದಿ: ಗ್ರೇಟರ್ ಬೆಂಗಳೂರು ಚುನಾವಣೆಗೆ ತಯಾರಿ ; ಉಸ್ತುವಾರಿ ಸಮಿತಿ ರಚಿಸಿದ ಎಚ್‌ಡಿಕೆ

ನಂತರ ನಗರಪಾಲಿಕೆ ವಲಯ ಕಚೇರಿ ಮೂರರಲ್ಲಿ ಗ್ರೇಟರ್ ಮೈಸೂರು ರಚನೆ ಕುರಿತು ಸಭೆ ನಡೆಸಲಿದ್ದಾರೆ. ನಂತರ,ಮಧ್ಯಾಹ್ನ ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ೪ಕ್ಕೆ, ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ, ವಿಶ್ರಾಂತಿ ಪಡೆಯಲಿರುವ ಸಿಎಂ,ಸಂಜೆ ಹೋಟೆಲ್ ಸದರನ್ ಸ್ಟಾರ್‌ನಲ್ಲಿ ನಡೆಯಲಿರುವಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ,ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡವರು. ಮರುದಿನ ಬೆಂಗಳೂರಿಗೆ ತೆರಳುವರು ಎಂದು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago