ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲುಸೂಚನೆ ನೀಡಿರುವುದಾಗಿ ತಿಳಿಸಿದರು.
2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾ ರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿ ಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜಿನ ಒಂದು ಭಾಗ ಕುಸಿದಿದ್ದು , ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.
51 ಕೋಟಿರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚ ದಲ್ಲಿ ಆರ್ಟ್ಸ್ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…