ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಮಲ್ಲಿಕಾರ್ಜುನಸ್ವಾಮಿ ಎ3, ಹಾಗೂ ದೇವರಾಜು ಎ4 ಆರೋಪಿಯನ್ನಾಗಿಸಿ ಮೈಸೂರಿನ ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ, ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು(ಅಕ್ಟೋಬರ್ 25) ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲೋಕಾಯುಕ್ತ ಎಸ್.ಪಿ. ಟಿ.ಜೆ.ಉದೇಶ್ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಮಹತ್ವದ ಹೇಳಿಕೆಗಳನ್ನು ಪಡೆದುಕೊಂಡು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಹಿಂದೆ ಪಾರ್ವತಿ ಅವರು ಮುಡಾದ 50:50 ಅನುಪಾತದ ಬದಲಿ ನಿವೇಶನಗಳನ್ನು ಹಿಂತಿರುಗಿಸುವ ಸಂದರ್ಭದಲ್ಲಿಯೂ ಸಹ ಗೌಪ್ಯತೆಯನ್ನು ಕಾಪಾಡಲಾಗಿತ್ತು.
ಈಗಾಗಲೇ ಮುಡಾ ಪ್ರಕರಣದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ನಡೆಸಿ ಮಾಹಿತಿಯನ್ನು ಪಡೆದುಕೊಂಡಿದ್ದರು. ಬಳಿಕ, ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…