ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.
ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
“ಮೈಸೂರು ವಿ.ವಿಯು ನಡೆಸುವ ಪಿ.ಎಚ್ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್ಎಫ್, ಎನ್ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.
“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.
“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.
ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…