ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.
ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
“ಮೈಸೂರು ವಿ.ವಿಯು ನಡೆಸುವ ಪಿ.ಎಚ್ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್ಎಫ್, ಎನ್ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.
“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.
“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.
ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…