ಮೈಸೂರು

ಸಿಎಂ ಭೇಟಿ : ಪಿಎಚ್‌.ಡಿ ಸಂಶೋಧನಾ ಆಕಾಂಕ್ಷಿಗಳನ್ನ ತಡೆದ ಪೊಲೀಸರು

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.

ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ  ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು  ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

“ಮೈಸೂರು ವಿ.ವಿಯು ನಡೆಸುವ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್‌ಎಫ್, ಎನ್‌ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.

“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.

“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್‌ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.

ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

7 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

7 hours ago