ಮೈಸೂರು

ಸಿಎಂ ಭೇಟಿ : ಪಿಎಚ್‌.ಡಿ ಸಂಶೋಧನಾ ಆಕಾಂಕ್ಷಿಗಳನ್ನ ತಡೆದ ಪೊಲೀಸರು

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.

ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ  ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು  ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

“ಮೈಸೂರು ವಿ.ವಿಯು ನಡೆಸುವ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್‌ಎಫ್, ಎನ್‌ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.

“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.

“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್‌ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.

ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…

13 seconds ago

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

3 hours ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

3 hours ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

3 hours ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

16 hours ago