Mysore
29
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ʻಜ್ಞಾನಬುತ್ತಿʼಯಿಂದ ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಎಸ್‌ಎಸ್‌ಸಿ ಮತ್ತು ಐಬಿಪಿಎಸ್‌ ಅವರು ನಡೆಸಲಿರುವ ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಆಗಸ್ಟ್‌ 17 ರೊಳಗೆ ಪ್ರತಿದಿನ ಸಂಜೆ 5:30ರಿಂದ 7:30ರೊಳಗಾಗಿ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಹೆಚ್.ಬಾಲಕೃಷ್ಣ(9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಯೋಕರಾದ ಸಿ.ಕೆ ಕಿರಣ್‌ಕೌಶಿಕ್(‌9972830857) ಕೆ.ವೈ ನಾಗೇಂದ್ರ(8296788251) ಅವರನ್ನು ಸಂಪರ್ಕಿಸಬಹುದಾಗಿದೆ.

 

 

Tags:
error: Content is protected !!