ಮೈಸೂರು

ʻಕೊಕೇನ್‌ ರಾಜ ಸಹಸ್ಯʼ ಕ್ರೈಂ ಡೈರಿ ಪುಸ್ತಕ ಬಿಡುಗಡೆ

ಮೈಸೂರು : ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್ ರಚಿತ ‘ಕೊಕೇನ್ ರಾಜ ರಹಸ್ಯ’, ‘ಕ್ರೈಂ ಡೈರಿ’ (4 ಭಾಗಗಳು) ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ನಗರದ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಕೃತಿಗಳನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ನಾವು ಓದಿದ ವಿಚಾರವನ್ನೆ ಬರೆಯಲು ಸಾಕಷ್ಟು ಕಷ್ಟಪಡುತ್ತೇವೆ. ಆದರೆ, ಪೊಲೀಸ್ ವೃತ್ತಿಯ ಜೊತೆಗೆ ಹಿರಿಯರಾದ ಗುರುಪ್ರಸಾದ್ ಅವರು, ನೂರಕ್ಕೂ ಹೆಚ್ಚು ಪುಸ್ತಕ ಬರೆದಿರುವುದು ನಮ್ಮೆಲ್ಲರಿಗೂ ಮಾದರಿ ಎಂದರು.

ಸದಾ ಒತ್ತಡದಲ್ಲಿರುವ ತಮ್ಮ ಮನಸ್ಸಿನ ಒತ್ತಡ ನಿವಾರಣೆ ಜೊತೆಗೆ ಕೆಲಸಕ್ಕೆ ಪ್ರೇರಣೆ ಪಡೆಯಲಿದ್ದಾರೆ. ಹಾಗೆಯೇ ನಮ್ಮ ಮಕ್ಕಳಿಗೆ ಓದಿನ ಅರಿವು ಮೂಡಿಸಬೇಕಾದರೆ, ಅವರಿಗೆ ದಿನಕ್ಕೆ ಒಂದು ಪದವನ್ನಾದರೂ ಕಲಿಸಬೇಕು. ನಾವು ಕೂಡ ಕಲಿಯಬೇಕು ಎಂದು ತಿಳಿಸಿದರು.

ಡಾ.ಡಿ.ವಿ.ಗುರುಪ್ರಸಾದ್ ಮಾತನಾಡಿ, ಕಳೆದ 45 ವರ್ಷದಿಂದ ಬರೆಯುತ್ತಿದ್ದೇನೆ. ಒಂದೊಂದು ಪುಸ್ತಕದಲ್ಲಿಯೂ ನಿಜವಾಗಿ ನಡೆದಿರುವ ಅಪರಾಧ ಕೃತ್ಯಗಳ ಮಾಹಿತಿ ಇದೆ. ಮೈಸೂರಿನಲ್ಲಿ ನಡೆದಿರುವ ಪ್ರಕರಣಗಳ ಬಗ್ಗೆಯೂ ಬರೆದಿದ್ದು, ರಾಜ್ಯದ ಸುಮಾರು 250 ಪ್ರಕರಣಗಳ ಕುರಿತು ಬರೆದಿದ್ದೇನೆ. ಯಾವ ಕಾರಣಕ್ಕೆ ಅಪರಾಧ ಕೃತ್ಯಗಳು ನಡೆದವು, ನಂತರ ಪೊಲೀಸರ ಕಾರ್ಯಾಚರಣೆ ಸೇರಿದಂತೆ ಪ್ರಮುಖ ಅಂಶಗಳನ್ನು ಕಥೆಯ ರೂಪದಲ್ಲಿ ಓದುಗರಿಗೆ ನೀಡಿದ್ದೇನೆ ಎಂದರು.

10 ವರ್ಷ ವೀರಪ್ಪನ್ ಬಗ್ಗೆ ಸಂಶೋಧನೆ ಮಾಡಿದ್ದೇನೆ. ವೀರಪ್ಪನ್ ಮಾಡಿದ್ದು, ಸುಮಾರು 125 ಕೊಲೆಗಳಾದರೆ, ಕೊಲಂಬಿಯಾ ದೇಶದ ಕುಖ್ಯಾತ ಕೊಲೆಗಾರ ಪಾಬ್ಲೊ ಎಸ್ಕೋಬಾರ್ ಸಾವಿರಾರು ಕೊಲೆಗಳನ್ನು ಮಾಡಿದ್ದಾನೆ. ಆತನ ಬಗ್ಗೆ ಕೊಕೇನ್ ರಾಜ ರಹಸ್ಯ ಪುಸ್ತಕ ಬರೆದಿದ್ದೇನೆ. ಇಡೀ ಕೊಲಂಬಿಯಾ ದೇಶದ ಸಾಲವನ್ನೇ ತೀರಿಸುವಷ್ಟು ಹಣ, ಆಸ್ತಿ ಸಂಪಾದಿಸಿದ್ದ ಆತ ಬದುಕಿದ್ದು, ಕೇವಲ 44 ವರ್ಷ ಅಪರಾಧ ಕೃತ್ಯಗಳಿಂದಾಗುವ ಪರಿಣಾಮಗಳನ್ನು ತಿಳಿಸುವ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇನೆ. ಈ ಪುಸ್ತಕಗಳು ಪೊಲೀಸ್ ಅಧಿಕಾರಿಗಳಿಗೆ ಮಾತ್ರವಲ್ಲದೆ ಸಾರ್ವಜನಿಕರೂ ಓದಬೇಕಿದೆ ಎಂದು ಹೇಳಿದರು.

ಡಿಸಿಪಿಗಳಾದ ಬಿಂದುಮಣಿ, ಸುಂದರ್ ರಾಜ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

18 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

18 hours ago