ಮೈಸೂರು

ಮೈಸೂರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಒಡಕು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲು ಮೈತ್ರಿಯ ನಾಯಕರು ಸಮನ್ವಯಕ್ಕೆ ಸಭೆ ನಡೆಸಿದ್ದರೂ ಕ್ಷೇತ್ರದ ಮೈತ್ರಿಯಲ್ಲಿ ಒಡಕು ಉಂಟಾದಂತೆ ಕಾಣುತ್ತಿದೆ.

ಹೌದು.. ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರದಲ್ಲಿ ಜೆಡಿಎಸ್‌ ನಾಯಕರ ಗೈರಾಗುತ್ತಿರುವುದು ಮೈತ್ರಿಯ ಒಡಕಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಯದುವೀರ್‌ ನಡೆಸುತ್ತಿರುವ ರೋಡ್‌ ಶೋ, ಕಾರ್ನರ್‌ ಸಭೆ, ಸಂವಾದ ಹಾಗೂ ಸಭೆಗಳಲ್ಲಿ ‌ಜೆಡಿಎಸ್‌ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಷ್ಟೇ ಪಾಲ್ಗೊಳ್ಳುತ್ತಿದ್ದು, ನಾಯಕರು ಬಾರದಿರುವುದು ಬಿಜೆಪಿ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ.

ಜೆಡಿಎಸ್‌ನವರಿಂದ ಅಷ್ಟೇನೂ ಸಹಕಾರ ದೊರೆಯುತ್ತಿಲ್ಲ
ಮಾರ್ಚ್‌ 27ರಂದು ನಗರದಲ್ಲಿ ನಡೆದಿದ್ದ ಬಿಜೆಪಿ–ಜೆಡಿಎಸ್‌ ಸಮನ್ವಯ ಸಭೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಈ ಭಾಗದ ಜೆಡಿಎಸ್ ನಾಯಕರು ಬಿಜೆಪಿ ನಾಯರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಜಿ.ಟಿ.ದೇವೇಗೌಡರು ಒಮ್ಮೆಯಷ್ಟೆ ಪ್ರಚಾರ ಮಾಡಿದ್ದಾರೆ. ಸಾ.ರಾ. ಮಹೇಶ್ ಸಮನ್ವಯ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ನಂತರ, ಈ ಯಾರೂ ಪ್ರಚಾರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ಜೆಡಿಎಸ್‌ ಮೈತ್ರಿ ಧರ್ಮ ಪಾಲಿಸುತ್ತಿದ್ದೆಯೇ? ಎಂಬ ಚರ್ಚೆಯನ್ನು ಹುಟ್ಟು ಹಾಕಿದೆ!

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago