ನಂಜನಗೂಡು : ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹುಂಡಿಯಲ್ಲಿ ಸುಮಾರು ೧.೭೮ಕೋಟಿ ರೂ. ಸಂಗ್ರಹವಾಗಿದೆ.
ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ದೇವಾಲಯದ ದಾಸೋಹ ಭವನದಲ್ಲಿ ಸುಮಾರು ೩೪ ಹುಂಡಿಗಳ ಏಣಿಕೆ ಕಾರ್ಯ ನಡೆಸಲಾಯಿತು.
ಪ್ರತಿಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ನಡೆದ ಗೌತಮ ಪಂಚಮಹಾರಥೋತ್ಸವ ಹಾಗೂ ಹುಣ್ಣಿಮೆಯ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಈ ಹೀನಲೆಯಲ್ಲಿ ೧ಕೋಟಿ ೭೮ಲಕ್ಷದ ೨೯ಸಾವಿರದ ೬೬೭ ರೂ.ಗಳಷ್ಟು ಹುಂಡಿ ಹಣ ಸಂಗ್ರಹವಾಗಿದೆ. ಇದೇ ವೇಳೆ ೧೨೩.೮೦೦ ಗ್ರಾಂ ಚಿನ್ನ, ೪ಕೆ.ಜಿ. ೬೦೦ ಗ್ರಾಂ ಬೆಳ್ಳಿ, ೨೬ ವಿದೇಶಿ ನೋಟುಗಳು ಕಾಣಿಕೆ ರೂಪದಲ್ಲಿ ಬಂದಿವೆ.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್, ಎಇಒ ಸತೀಶ್, ಇಒ ಕೃಷ್ಣ, ಕೆನರಾ ಬ್ಯಾಂಕ್ ನಂಜನಗೂಡು ಶಾಕೆಯ ಮ್ಯಾನೇಜರ್ ಲಕ್ಷ್ಮಿ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಗದ ಮಹಿಳೆಯರು ಹುಂಡಿ ಏಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…