ಮೈಸೂರು

ನಂಜುಂಡೇಶ್ವರನ ಹುಂಡಿಯಲ್ಲಿ ʼ೧ ಕೋಟಿʼಗೂ ಅಧಿಕ ಹಣ ಸಂಗ್ರಹ !

ನಂಜನಗೂಡು : ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹುಂಡಿಯಲ್ಲಿ ಸುಮಾರು ೧.೭೮ಕೋಟಿ ರೂ. ಸಂಗ್ರಹವಾಗಿದೆ.

ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ದೇವಾಲಯದ ದಾಸೋಹ ಭವನದಲ್ಲಿ ಸುಮಾರು ೩೪ ಹುಂಡಿಗಳ ಏಣಿಕೆ ಕಾರ್ಯ ನಡೆಸಲಾಯಿತು.

ಪ್ರತಿಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ನಡೆದ ಗೌತಮ ಪಂಚಮಹಾರಥೋತ್ಸವ ಹಾಗೂ ಹುಣ್ಣಿಮೆಯ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಈ ಹೀನಲೆಯಲ್ಲಿ ೧ಕೋಟಿ ೭೮ಲಕ್ಷದ ೨೯ಸಾವಿರದ ೬೬೭ ರೂ.ಗಳಷ್ಟು ಹುಂಡಿ ಹಣ ಸಂಗ್ರಹವಾಗಿದೆ. ಇದೇ ವೇಳೆ ೧೨೩.೮೦೦ ಗ್ರಾಂ ಚಿನ್ನ, ೪ಕೆ.ಜಿ. ೬೦೦ ಗ್ರಾಂ ಬೆಳ್ಳಿ, ೨೬ ವಿದೇಶಿ ನೋಟುಗಳು ಕಾಣಿಕೆ ರೂಪದಲ್ಲಿ ಬಂದಿವೆ.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್‌ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್‌ ಪ್ರಸಾದ್‌, ಎಇಒ ಸತೀಶ್‌, ಇಒ ಕೃಷ್ಣ, ಕೆನರಾ ಬ್ಯಾಂಕ್‌ ನಂಜನಗೂಡು ಶಾಕೆಯ ಮ್ಯಾನೇಜರ್‌ ಲಕ್ಷ್ಮಿ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಗದ ಮಹಿಳೆಯರು ಹುಂಡಿ ಏಣಿಕೆ ಕಾರ್ಯದಲ್ಲಿ ತೊಡಗಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago