ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು.
ಮೃತ ರವಿಕುಮಾರ್ ಅವರ ಸಹೋದರಿ ಶಾರದಮ್ಮ ಮತ್ತು ಪತ್ನಿ ಸವಿತಾ ಸೇರಿದಂತೆ ಗಾಯಗೊಂಡಿರುವ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರಳು ಗುತ್ತಿಗೆದಾರ ಕೆಂಪಯ್ಯನಹುಂಡಿ ಗ್ರಾಮದ ಕೆ.ಅರುಣ್ ಕುಮಾರ್ ಅವರ ಭಾವ ರವಿಕುಮಾರ್ ವ್ಯವಸಾಯ ಮಾಡಿಕೊಂಡಿದ್ದರು. ಭಾನುವಾರ ಬೆಳಿಗ್ಗೆ ಕೆ.ಆರ್. ನಗರದಲ್ಲಿ ನಡೆಯುತ್ತಿದ್ದ ಮದುವೆಗೆ ತಮ್ಮ ಪತ್ನಿ ಸವಿತಾ ಹಾಗೂ ಅಕ್ಕ ಶಾರದಮ್ಮ ಅವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮದುವೆ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ವೇಳೆ ಮದುವೆ ಮುಗಿಸಿಕೊಂಡು ಬರುವ ವೇಳೆ ಎಂ.ಸಿ.ಹುಂಡಿ ಬಳಿ ಎದುರಿನಿಂದ ಬಂದ ಮಾರುತಿ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:-ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ
ಎದುರಿನಿಂದ ಬರುತ್ತಿದ್ದ ಕಾರಿನಲ್ಲಿ ಇದ್ದವರು ಮೈಸೂರಿನ ಬೆಲವತ್ತ ಮಂಟಿಯವರಾಗಿದ್ದು ಚಾಮರಾಜನಗರದಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಈ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರುಣ ಪೊಲೀಸ್ ಠಾಣೆಯ ಎಸ್ಐ ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…