ಮೈಸೂರು

ಕಾರುಗಳ ನಡುವೆ ಡಿಕ್ಕಿ : ಓರ್ವ ಸಾವು, 7 ಮಂದಿಗೆ ಗಾಯ

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು.
ಮೃತ ರವಿಕುಮಾರ್ ಅವರ ಸಹೋದರಿ ಶಾರದಮ್ಮ ಮತ್ತು ಪತ್ನಿ ಸವಿತಾ ಸೇರಿದಂತೆ ಗಾಯಗೊಂಡಿರುವ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಳು ಗುತ್ತಿಗೆದಾರ ಕೆಂಪಯ್ಯನಹುಂಡಿ ಗ್ರಾಮದ ಕೆ.ಅರುಣ್ ಕುಮಾರ್ ಅವರ ಭಾವ ರವಿಕುಮಾರ್ ವ್ಯವಸಾಯ ಮಾಡಿಕೊಂಡಿದ್ದರು. ಭಾನುವಾರ ಬೆಳಿಗ್ಗೆ ಕೆ.ಆರ್. ನಗರದಲ್ಲಿ ನಡೆಯುತ್ತಿದ್ದ ಮದುವೆಗೆ ತಮ್ಮ ಪತ್ನಿ ಸವಿತಾ ಹಾಗೂ ಅಕ್ಕ ಶಾರದಮ್ಮ ಅವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮದುವೆ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ವೇಳೆ ಮದುವೆ ಮುಗಿಸಿಕೊಂಡು ಬರುವ ವೇಳೆ ಎಂ.ಸಿ.ಹುಂಡಿ ಬಳಿ ಎದುರಿನಿಂದ ಬಂದ ಮಾರುತಿ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:-ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ

ಎದುರಿನಿಂದ ಬರುತ್ತಿದ್ದ ಕಾರಿನಲ್ಲಿ ಇದ್ದವರು ಮೈಸೂರಿನ ಬೆಲವತ್ತ ಮಂಟಿಯವರಾಗಿದ್ದು ಚಾಮರಾಜನಗರದಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಈ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರುಣ ಪೊಲೀಸ್ ಠಾಣೆಯ ಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

4 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

33 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

59 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago