ಮೈಸೂರು

ಕಾರುಗಳ ನಡುವೆ ಡಿಕ್ಕಿ : ಓರ್ವ ಸಾವು, 7 ಮಂದಿಗೆ ಗಾಯ

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು.
ಮೃತ ರವಿಕುಮಾರ್ ಅವರ ಸಹೋದರಿ ಶಾರದಮ್ಮ ಮತ್ತು ಪತ್ನಿ ಸವಿತಾ ಸೇರಿದಂತೆ ಗಾಯಗೊಂಡಿರುವ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಳು ಗುತ್ತಿಗೆದಾರ ಕೆಂಪಯ್ಯನಹುಂಡಿ ಗ್ರಾಮದ ಕೆ.ಅರುಣ್ ಕುಮಾರ್ ಅವರ ಭಾವ ರವಿಕುಮಾರ್ ವ್ಯವಸಾಯ ಮಾಡಿಕೊಂಡಿದ್ದರು. ಭಾನುವಾರ ಬೆಳಿಗ್ಗೆ ಕೆ.ಆರ್. ನಗರದಲ್ಲಿ ನಡೆಯುತ್ತಿದ್ದ ಮದುವೆಗೆ ತಮ್ಮ ಪತ್ನಿ ಸವಿತಾ ಹಾಗೂ ಅಕ್ಕ ಶಾರದಮ್ಮ ಅವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮದುವೆ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ವೇಳೆ ಮದುವೆ ಮುಗಿಸಿಕೊಂಡು ಬರುವ ವೇಳೆ ಎಂ.ಸಿ.ಹುಂಡಿ ಬಳಿ ಎದುರಿನಿಂದ ಬಂದ ಮಾರುತಿ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:-ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ

ಎದುರಿನಿಂದ ಬರುತ್ತಿದ್ದ ಕಾರಿನಲ್ಲಿ ಇದ್ದವರು ಮೈಸೂರಿನ ಬೆಲವತ್ತ ಮಂಟಿಯವರಾಗಿದ್ದು ಚಾಮರಾಜನಗರದಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಈ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರುಣ ಪೊಲೀಸ್ ಠಾಣೆಯ ಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago