Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಟಿ.ನರಸೀಪುರ| ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

accident

ಟಿ.ನರಸೀಪುರ: ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:- ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Tags:
error: Content is protected !!