Combing operation tiger capture
ವೀರನಹೊಸಹಳ್ಳಿ: ಹನಗೋಡಿಗೆ ಸಮೀಪದ ನೇರಳಕುಪ್ಪೆ ಗ್ರಾ.ಪಂ.ನ ನೇಗತ್ತೂರಿನಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹುಲಿ ಪತ್ತೆಗೆ ಸಾಕಾನೆ ಸಹಾಯದೊಂದಿಗೆ ಶುಕ್ರವಾರ ಕೂಂಬಿಂಗ್ ಕಾರ್ಯ ಆರಂಭಿಸಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿ ಅರಣ್ಯ ಪ್ರದೇಶದಂಚಿನ ನೇಗತ್ತೂರಿನ ವೆಂಕಟೇಶ್ ರವರ ಜಮೀನಿನಲ್ಲಿ ಹಸುವೊಂದು ಮೇವು ಮೇಯುತ್ತಿದ್ದ ವೇಳೆ ಹುಲಿ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಹುಣಸೂರು ಆರ್ಎಫ್ಒ ಸುಬ್ರಹ್ಮಣ್ಯರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಹುಲಿ ಪತ್ತೆಗೆ ಸಾಕಾನೆ ಗಣೇಶನ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಹಿಂದೆಯೂ ಅನೇಕ ಬಾರಿ ಹುಲಿ ದಾಳಿ ನಡೆಸಿದಾಗ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರೂ ಹುಲಿ ದಾಳಿ ಮಾತ್ರ ನಿಂತಿಲ್ಲ. ಇದೀಗ ಮತ್ತೆ ಹುಲಿ ಕಾಣಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದರೂ, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಕೂಡಲೇ ಹುಲಿ ಸೆರೆಹಿಡಿದು ನೆಮ್ಮದಿಯ ಬದುಕಿಗೆ ಅವಕಾಶ ಕಲ್ಪಿಸಬೇಕೆಂದು ಉದ್ಯಾನದಂಚಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಶುಕ್ರವಾರ ಗಣೇಶ ಎಂಬ ಸಾಕಾನೆ ಸಹಾಯದಿಂದ ಹುಲಿ ಪತ್ತೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇದಲ್ಲದೆ ಹುಲಿ ಚಲನ-ವಲನದ ಬಗ್ಗೆ ಗಮನಿಸಲು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿತ್ರಗಳನ್ನಾಧರಿಸಿ ಮತ್ತೆ ಹುಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಆರ್ಎಫ್ಒ ಸುಬ್ರಹ್ಮಣ್ಯ ತಿಳಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…