ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಯಾದ ನಗರದ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಎಂಸಿಎ ಮತ್ತು ಎಂಬಿಎ ಸ್ನಾತಕೋತ್ತರ ತರಗತಿಗಳಿಗೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಚಾಲನೆ ನೀಡಿದರು.
ನಗರದ ಸಂತ ಫಿಲೋಮಿನಾ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳ ಪ್ರಾರಂಭೋತ್ಸವದ ಅಧ್ಯಕ್ಷತೆಯನ್ನು ವಹಿಸಿದ್ದ ಮೈಸೂರು ಧರ್ಮ ಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿಗಳಾದ ಡಾ. ಬರ್ನಾರ್ಡ್ ಮೊರಾಸ್ ಅವರು ವಿವಿಧ ಧಾರ್ಮಿಕ ಕಾರ್ಯ ನೆರವೇರಿಸಿದರು.
ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿ, ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸುಸಜ್ಜಿತ ಕಟ್ಟಡ ಅಗತ್ಯವಾದ ಲ್ಯಾಬ್ ಇದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಉಪ ಪ್ರಾಂಶುಪಾಲರಾದ ರೋನಾಲ್ಡ್ ಪ್ರಕಾಶ್ ಕುಟಿನೋ, ಸಂತ ಫಿಲೋಮಿನಾ ಕಾಲೇಜು ಮಹಾವಿದ್ಯಾಲಯವು “ಪ್ರೀತಿಯ ಮುಖೇನ ಜ್ಞಾನ” ಎಂಬ ಧ್ಯೇಯದೊಂದಿಗೆ ೧೯೪೬ರಲ್ಲಿ ಮೈಸೂರು ಮಹಾ ಸಂಸ್ಥಾನದಲ್ಲಿ ಮೊಟ್ಟ ಮೊದಲ ಖಾಸಗಿ ವಿಜ್ಞಾನ ಕಾಲೇಜಾಗಿ ಸ್ಥಾಪಿತಗೊಂಡಿತು.
ನಂತರದ ವರ್ಷಗಳಲ್ಲಿ ಶೈಕ್ಷಣಿಕ ಘನತೆಯನ್ನು ಸಾಕ್ಷೀಕರಿಸುವತ್ತ ನಿರಂತರವಾಗಿ ಸಾಗುತ್ತಾ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಗಣನೀಯ ಸಾಧನೆ ಮತ್ತು ಹಲವು ವಿಕ್ರಮಗಳನ್ನು ಸಾಧಿಸಿದೆ. ಇದಕ್ಕೆ ಪೂರಕವಾಗಿ, ಈ ಶೈಕ್ಷಣಿಕ ಸಾಲಿನಲ್ಲಿ ಎಂ.ಬಿ.ಎ ಮತ್ತು ಎಂ.ಸಿ.ಎ ಸ್ನಾತಕೋತ್ತರ ಪದವಿಗಳನ್ನು ಪ್ರಾರಂಭಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಕ್ಸ್ಐಎಂಇ ಅಧ್ಯಕ್ಷರಾದ ಪ್ರೊ. ಜೆ. ಫಿಲಿಪ್, ಯುಜಿಸಿ ಶೈಕ್ಷಣಿಕ ಅಧಿಕಾರಿ ಡಾ. ಕೆ.ಸಿ.ಲತಾ ಮತ್ತಿತರರು ಇದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…