ಮೈಸೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ, ಎಂಬಿಎ ಪ್ರಾರಂಭೋತ್ಸವಕ್ಕೆ ಚಾಲನೆ

ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಯಾದ ನಗರದ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಎಂಸಿಎ ಮತ್ತು ಎಂಬಿಎ ಸ್ನಾತಕೋತ್ತರ ತರಗತಿಗಳಿಗೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಚಾಲನೆ ನೀಡಿದರು.

ನಗರದ ಸಂತ ಫಿಲೋಮಿನಾ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳ ಪ್ರಾರಂಭೋತ್ಸವದ ಅಧ್ಯಕ್ಷತೆಯನ್ನು ವಹಿಸಿದ್ದ ಮೈಸೂರು ಧರ್ಮ ಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿಗಳಾದ ಡಾ. ಬರ್ನಾರ್ಡ್ ಮೊರಾಸ್ ಅವರು ವಿವಿಧ ಧಾರ್ಮಿಕ ಕಾರ್ಯ ನೆರವೇರಿಸಿದರು.

ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿ, ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸುಸಜ್ಜಿತ ಕಟ್ಟಡ ಅಗತ್ಯವಾದ ಲ್ಯಾಬ್ ಇದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಉಪ ಪ್ರಾಂಶುಪಾಲರಾದ ರೋನಾಲ್ಡ್ ಪ್ರಕಾಶ್ ಕುಟಿನೋ, ಸಂತ ಫಿಲೋಮಿನಾ ಕಾಲೇಜು ಮಹಾವಿದ್ಯಾಲಯವು “ಪ್ರೀತಿಯ ಮುಖೇನ ಜ್ಞಾನ” ಎಂಬ ಧ್ಯೇಯದೊಂದಿಗೆ ೧೯೪೬ರಲ್ಲಿ ಮೈಸೂರು ಮಹಾ ಸಂಸ್ಥಾನದಲ್ಲಿ ಮೊಟ್ಟ ಮೊದಲ ಖಾಸಗಿ ವಿಜ್ಞಾನ ಕಾಲೇಜಾಗಿ ಸ್ಥಾಪಿತಗೊಂಡಿತು.

ನಂತರದ ವರ್ಷಗಳಲ್ಲಿ ಶೈಕ್ಷಣಿಕ ಘನತೆಯನ್ನು ಸಾಕ್ಷೀಕರಿಸುವತ್ತ ನಿರಂತರವಾಗಿ ಸಾಗುತ್ತಾ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಗಣನೀಯ ಸಾಧನೆ ಮತ್ತು ಹಲವು ವಿಕ್ರಮಗಳನ್ನು ಸಾಧಿಸಿದೆ. ಇದಕ್ಕೆ ಪೂರಕವಾಗಿ, ಈ ಶೈಕ್ಷಣಿಕ ಸಾಲಿನಲ್ಲಿ ಎಂ.ಬಿ.ಎ ಮತ್ತು ಎಂ.ಸಿ.ಎ ಸ್ನಾತಕೋತ್ತರ ಪದವಿಗಳನ್ನು ಪ್ರಾರಂಭಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಕ್ಸ್‌ಐಎಂಇ ಅಧ್ಯಕ್ಷರಾದ ಪ್ರೊ. ಜೆ. ಫಿಲಿಪ್, ಯುಜಿಸಿ ಶೈಕ್ಷಣಿಕ ಅಧಿಕಾರಿ ಡಾ. ಕೆ.ಸಿ.ಲತಾ ಮತ್ತಿತರರು ಇದ್ದರು.

andolanait

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

4 hours ago