ಮೈಸೂರು

ನಂಜನಗೂಡು ಅಭಿವೃದ್ದಿಗೆ ಬದ್ಧ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ನಂಜನಗೂಡು: ಮೈಸೂರು ಸಾಂಸ್ಕೃತಿಕ ನಗರವಾದರೆ, ನಂಜನಗೂಡು ಸಾಂಸ್ಕೃತಿಕ ನಗರದ ಮುಕುಟವಾಗಿದೆ. ಈ ಹಿನ್ನೆಲೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹಚ್.ಸಿ.ಮಹದೇವಪ್ಪ ಹೇಳಿದರು.

ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಯಾತ್ರಿನಿವಾಸ ಹಾಗೂ ಲೋಕೋಪಯೋಗಿ ಕಾಮಗಾರಿಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ಕೃಷಿ, ನೀರಾವರಿ, ಮೂಲಸೌಕರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು ಎಂದರು‌.

ನಂಜನಗೂಡು ತಾಲ್ಲೂಕು ಎಂದರೆ ನನಗೆ ಅತ್ಯಂತ ಪ್ರೀತಿ. ಅದರಂತೆ ಇಲ್ಲಿನ ಜನರು ಕೂಡ ನನಗೆ ಅಧಿಕಾರ ಇರಲಿ, ಇಲ್ಲದಿರಲಿ ಅಭಿಮಾನ ಮತ್ತು ಪ್ರೀತಿಯನ್ನು ನೀಡಿದ್ದಾರೆ. ನಾನು ಕೂಡ ಈ ಭಾಗದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದೇನೆ. ರಾಜಕೀಯವಾಗಿ ದೇವನೂರು ಪ್ರಭಾವ ನನ್ನ ಮೇಲೆ ಬೀರಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗುರುಮಲ್ಲೇಶ್ವರ ಮಠವು ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಎಲ್ಲಾ ಧರ್ಮ ಹಾಗೂ ಜಾತಿಗಳು ಕೂಡ ಸ್ನೇಹ, ಸಹನೆ, ವಿಶ್ವಾಸದಿಂದ, ತಾರತಮ್ಯ, ಈರ್ಷೆ ಇಲ್ಲದೆ ಬದುಕಬೇಕು ಎಂಬುದು ಶ್ರೀ ಮಠದ ಉದ್ದೇಶವಾಗಿದೆ. ಮನುಕುಲದ ಉದ್ದಾರಕ್ಕೆ ಮಠದ ಕೊಡುಗೆ ಅನನ್ಯ‌. ಹೀಗಾಗಿ ಎಲ್ಲಾ ಜನರು ಗೌರವಿಸುವ ಕ್ಷೇತ್ರವಾಗಿದೆ. ರಾಜ್ಯದ ಉದ್ದಗಲಕ್ಕೂ ಎಲ್ಲಾ ವರ್ಗದ ಜನರನ್ನು ಆಕರ್ಷಿಸುತ್ತದೆ ಎಂದರು.

ನಂಜನಗೂಡು ಭಾಗದದಲ್ಲಿ ವೀರಶೈವ ಚಳುವಳಿಯ ಕಾರ್ಯಚಟುವಟಿಕೆ ಚುರುಕುಗೊಳಿಸಿದ್ದು ಈ ಸಂಸ್ಥಾನವಾಗಿದೆ. ಈ ಮಹಾಸಂಸ್ಥಾನವು ಅಭಿವೃದ್ಧಿಯಲ್ಲಿ ಹಿಂದುಳಿಯಬಾರದು ಎಂಬ ಅಭಿಲಾಷೆ ನನಗಿದೆ. ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ದೇವನೂರು ಏತನೀರಾವರಿ ಯೋಜನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಅನುಮೋದನೆ ಮಾಡಿದ್ದಾರೆ. ಕೆಲವು ತೊಡಕುಗಳು ಬಗೆಹರಿದ ಬಳಿಕ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ದರ್ಶನ್ ಧ್ರುವನಾರಾಯಣ  ಮಾತನಾಡಿ, ದೇವನೂರು ಏತನೀರಾವರಿ ಯೋಜನೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ಭರವಸೆ ಇದೆ. ಬದನವಾಳು ಖಾದಿ ಕೇಂದ್ರದ ಅಭಿವೃದ್ಧಿಗೂ ಕೂಡ ನಮ್ಮ ಸರ್ಕಾರ ಯೋಜನೆ ರೂಪಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಮಹಾಂತಸ್ವಾಮೀಜಿಗಳು ಸಾನ್ಯಿಧ್ಯ ವಹಿಸಿದ್ದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜು, ಉಪಾಧ್ಯಕ್ಷರಾದ ಶಶಿಕಲಾ, ವೀರಶೈವ ಮಹಾಸಭಾ ನಂಜನಗೂಡು ಘಟಕದ ಮಾಜಿ ಅಧ್ಯಕ್ಷ ದೇವನೂರು ಮಹದೇವಪ್ಪ, ಮುಖಂಡರಾದ ಕುರಟ್ಟಿ ಮಹೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago