ವೀರನಹೊಸಹಳ್ಳಿ : ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ನಾಗಪುರ ಹಾಡಿಯಲ್ಲಿ ಹುಲಿ ದಾಳಿಗೆ ಬಲಿಯಾಗಿದ್ದ ಹರೀಶ್ ಮನೆಗೆ ಭೇಟಿ ನೀಡಿ ಪರಿಹಾರದ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಸುಪಾಸಿನ ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಕ್ಷಿತಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
‘ಬಡವರು, ಆದಿವಾಸಿಗಳು ಸಹ ವಾಸಿಸಬೇಕು. ಆ ನಿಟ್ಟಿನಲ್ಲಿ ಅವರಿಗೆ ಭೂಮಿ ಒದಗಿಸಬೇಕು. ಆದಿವಾಸಿಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು. ಮಾನವೀಯತೆಯಿಂದ ನೋಡಬೇಕು ಎಂದು ಶಾಸಕರು ತಿಳಿಸಿದರು.
ಅರಣ್ಯ ಅಂಚಿನಲ್ಲಿಯೂ ಸಾಕಷ್ಟು ಭೂಮಿ ಒತ್ತುವರಿಯಾಗಿದೆ. ಆದಿವಾಸಿಗಳು, ಬಡವರಿಗೆ ಸಹ ವಾಸಕ್ಕೆ ಜಾಗ ಒದಗಿಸಬೇಕಿದೆ ಎಂದು ಹೇಳಿದರು.
ಹುಲಿ ಸೆರೆ ಕಾರ್ಯಾಚರಣೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಈ ಸಂಬಂಧ ೩ ತಿಂಗಳಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರಂತೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.
ಎಸಿಎಫ್ ಮಹಾದೇವಯ್ಯ ಮಾತನಾಡಿ, ಹುಲಿಯ ಚಲನವಲನದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ವಲಯ ಅರಣ್ಯಾಧಿಕಾರಿ ನಂದಕುಮಾರ್ ಸುಬ್ರಹ್ಮಣ್ಯ, ಎಪಿಎಂಸಿ ಮಾಜಿ ಅದ್ಯಕ್ಷ ಸುಭಾಷ್, ಹೊಸೂರು ಅಣ್ಣಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ಸತೀಶ್, ಪಾಪಣ್ಣ, ಹರವೆ ಶ್ರೀಧರ್, ವಿಜಿ, ವಸಂತ, ಶಿವಣ್ಣ , ಅಧಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…