ಮೈಸೂರು

ಹುಲಿ ದಾಳಿಯಿಂದ ಮೃತಪಟ್ಟಿದ್ದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಣೆ

ವೀರನಹೊಸಹಳ್ಳಿ : ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ನಾಗಪುರ ಹಾಡಿಯಲ್ಲಿ ಹುಲಿ ದಾಳಿಗೆ ಬಲಿಯಾಗಿದ್ದ ಹರೀಶ್ ಮನೆಗೆ ಭೇಟಿ ನೀಡಿ ಪರಿಹಾರದ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಸುಪಾಸಿನ ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಕ್ಷಿತಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

‘ಬಡವರು, ಆದಿವಾಸಿಗಳು ಸಹ ವಾಸಿಸಬೇಕು. ಆ ನಿಟ್ಟಿನಲ್ಲಿ ಅವರಿಗೆ ಭೂಮಿ ಒದಗಿಸಬೇಕು. ಆದಿವಾಸಿಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು. ಮಾನವೀಯತೆಯಿಂದ ನೋಡಬೇಕು ಎಂದು ಶಾಸಕರು ತಿಳಿಸಿದರು.

ಅರಣ್ಯ ಅಂಚಿನಲ್ಲಿಯೂ ಸಾಕಷ್ಟು ಭೂಮಿ ಒತ್ತುವರಿಯಾಗಿದೆ. ಆದಿವಾಸಿಗಳು, ಬಡವರಿಗೆ ಸಹ ವಾಸಕ್ಕೆ ಜಾಗ ಒದಗಿಸಬೇಕಿದೆ ಎಂದು ಹೇಳಿದರು.

ಹುಲಿ ಸೆರೆ ಕಾರ್ಯಾಚರಣೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಈ ಸಂಬಂಧ ೩ ತಿಂಗಳಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.

ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರಂತೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.

ಎಸಿಎಫ್ ಮಹಾದೇವಯ್ಯ ಮಾತನಾಡಿ, ಹುಲಿಯ ಚಲನವಲನದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ವಲಯ ಅರಣ್ಯಾಧಿಕಾರಿ ನಂದಕುಮಾರ್ ಸುಬ್ರಹ್ಮಣ್ಯ, ಎಪಿಎಂಸಿ ಮಾಜಿ ಅದ್ಯಕ್ಷ ಸುಭಾಷ್, ಹೊಸೂರು ಅಣ್ಣಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ಸತೀಶ್, ಪಾಪಣ್ಣ, ಹರವೆ ಶ್ರೀಧರ್, ವಿಜಿ, ವಸಂತ, ಶಿವಣ್ಣ , ಅಧಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago