ಮೈಸೂರು

ಆತಂಕ ಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆಎದುರಿಸಿ ; ಶೇಖ್‌ ತನ್ವೀರ್‌ ಆಸೀಫ್‌

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರೀಕ್ಷೆ ಯಶಸ್ಸಿನ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಎಂದು ಹೇಳಿದರು.

ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ. ಅಹಂಕಾರ ಬಿಡಿ ಮಾನವೀಯತೆ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಓದುವ ಸಮಯದಲ್ಲಿ ನಿಮ್ಮ ಸುತ್ತಮುತ್ತಲಿನ ಪರಿಸರ, ಜನಸಾಮಾನ್ಯರ ಸಮಸ್ಯೆ, ಜೈವಿಕ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಿ. ಪ್ರತಿ ವರ್ಷದ ಪ್ರಶ್ನೆ ಪತ್ರಿಕೆ ತಾಳೆಹಾಕಿ ಜೊತೆಗೆ ಪ್ರತಿದಿನ ನಿಮ್ಮ ಶಬ್ದಕೋಶ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.

ಸಮಸ್ಯೆ ಎಂತದ್ದೆ ಇರಲಿ ಎದುರಿಸುವ ‌ಧೈರ್ಯ ಬೆಳೆಸಿಕೊಳ್ಳಿ. ಪರೀಕ್ಷೆ ಬಗ್ಗೆ ಗಮನದ ಜೊತೆಗೆ ಕಣ್ಣಿನ ನೋಟ ಗುರಿಯ ಕಡೆ ಇರಲಿ ಎಂದರು.

ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿ ಪ್ರಿಯಾ ಅವರು, ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಇದ್ದೇ ಇರುತ್ತೆ. ಅವುಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮ ಗುರಿ ತಲುಪಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಹೆಚ್ಚಬೇಕು. ಇಲ್ಲಿಯೂ ಸಹ ಮಹಿಳಯರೇ ಹೆಚ್ಚಿದ್ದೀರಾ. ಮಹಿಳೆಯರ ಶ್ರದ್ದೆ ಮತ್ತು ನಿಷ್ಠೆ ಇಂದಿನ ಕೆಲಸಗಳಿಗೆ ತುಂಬಾ ಅನಿವಾರ್ಯ ಎಂದು ಹೇಳಿದರು.

ಮೊಬೈಲ್ ಗೀಳು ಯುವ ಸಮೂಹ ಹಾಗೂ ಸಮಾಜವನ್ನು ಹಾಳು ಮಾಡುತ್ತಿದೆ. ಸಮಯವೇ ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಜನರು ಮೊಬೈಲ್ ನಲ್ಲಿ ರೀಲ್ಸ್ ಸ್ಕ್ರಾಲ್ ಮಾಡೊದು ಬಿಟ್ಟು ನೋಡಿ ನಿಮ್ಮ ಸಮಯ ಎಲ್ಲಿ ಕಳೆದು ಹೋಗುತ್ತಿದೆ ಎಂದು ಗೊತ್ತಾಗುತ್ತದೆ. ಮುಖ್ಯವಾಗಿ ಯುವ ಸಮೂಹ ಮೊಬೈಲ್ ಗೀಳಿನಿಂದ ಹೊರಬಂದು ಪರಿಶ್ರಮ ಪಟ್ಟು ಅಧ್ಯಯನ ಮಾಡಬೇಕು ಎಂದು ನುಡಿದರು.

ಸಮಯ ನಿರ್ವಹಣೆಯ ಬಗ್ಗೆಯೂ ಗಮನ ಹರಿಸಿ. ದುಶ್ಚಟಗಳಿಂದ ದೂರ ಉಳಿದು ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು‌ ಹೇಳಿದರು.

ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ ಎಂದು ಹೇಳಿದರು.

ಗುರು-ಹಿರಿಯರು ಹಾಗೂ ಅನುಭವಿಗಳು ಹೇಳುವ ಅನುಭವಗಳನ್ನು ಚಾಚುತಪ್ಪದೆ ಪಾಲಿಸಬೇಕು. ಅರಿವೇ ಗುರು ಎನ್ನುವ ಹಾಗೆ ನಿಮ್ಮನ್ನು ನೀವೆ ಆತ್ಮ ಅವಲೋಕನೆ ಮಾಡಿಕೊಳ್ಳಿ. ಯಶಸ್ಸಿಗೆ ಗುರಿ ದೊಡ್ಡದಾಗಿರಲಿ. ಎಲ್ಲರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭವಿಷ್ಯದಲ್ಲಿ ದೇಶಕ್ಕೆ ಮಾದರಿಯಾಗುವ ಅಧಿಕಾರಿಗಳಾಗಿ ಎಂದು ಶುಭಹಾರೈಸಿದರು.

ಕುಲಸಚಿವ ಪ್ರೊ.ಕೆ.ಬಿ ಪ್ರವೀಣ  ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ ವರ್ಕ್ ಮಾಡಬೇಕು. ಏನೇ ಮಾಡಿದರು ಆಸೆ ಪಟ್ಟು ಮಾಡಿ. ಆವಾಗ ಎಲ್ಲವೂ ಸಕಾರಗೊಳ್ಳುವುದು ಎಂದರು.

ನಮ್ಮ ಕೆ.ಎಸ್.ಒ.ಯು ವಿವಿಯು ಇಂತಹ ಅನೇಕ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ ಲಾಭ ಪಡೆದ ವಿದ್ಯಾರ್ಥಿಗಳು ದೇಶಕ್ಕೆ ಸೇವೆ ಮಾಡಿ. ಜೊತೆಗೆ ಇಲ್ಲಿನ ಶೈಕ್ಷಣಿಕ ಕೋರ್ಸ್ಗಳನ್ನು ಸಹ ಬಳಸಿಕೊಳ್ಳಿ. ಇಲ್ಲಿಯೂ ಸಹ ಪದವಿ ಪಡೆದುಕೊಳ್ಳಿ. ಈ ವರ್ಷದ ಪ್ರವೇಶಾತಿಗಳು ಈಗಾಗಲೇ ಪ್ರಾರಂಭವಾಗಿದೆ. ಪ್ರವೇಶಾತಿ ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಹೆಚ್.ವಿಶ್ವನಾಥ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್, ಗಣೇಶ್ ಸೇರಿದಂತೆ ಇತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

3 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

4 hours ago