ಮೈಸೂರು: ನನ್ನ ಧ್ವನಿ ಅಡಗಿಸಲು ನನ್ನ ಮೇಲೆ ಸರ್ಕಾರ ದೂರು ದಾಖಲಿಸಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ದೂರಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಗಿರಿ ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿಯನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.
ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿಕೊಂಡು ಪೊಲೀಸರ ಮೇಲೆ ಆಕ್ರಮಣ ಮಾಡಿದರು. ಈ ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಧೈರ್ಯದಿಂದ ಇರಿ ಎಂದು ಮಾತನಾಡಿದೆವು. ಇದು ಪ್ರಚೋದನಕಾರಿ ವಿಚಾರವೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ಹಲವು ಎಫ್ಐಆರ್ ದಾಖಲಿಸಿದೆ. ವಿಧಾನಸಭಾ ಚುನಾವಣೆಯ ವೇಳೆ ವರುಣದಲ್ಲಿ ೨, ಶಿಗ್ಗಾಂವಿ, ದಾವಣಗೆರೆ, ಬೆಂಗಳೂರಿನ ಬಸವೇಶ್ವರ ನಗರ, ಮಾಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದರು. ಈಗ ಉದಯಗಿರಿ ಪ್ರಕರಣದೊಂದಿಗೆ ಸಾಲು ಸಾಲು ಎಫ್ಐಆರ್ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಿ ಮನೆಯಿಂದ ಹೊರಬರಬಾರದು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಮರು ತಮ್ಮ ಮಕ್ಕಳನ್ನು ದೇವರು ಕೊಟ್ಟಿದ್ದು ಎನ್ನುತ್ತಾರೆ. ಹಾಗಾದರೆ ನಿಮ್ಮ ಮಕ್ಕಳನ್ನು ದೇವರೇ ನೋಡಿಕೊಳ್ಳಲಿ. ಸರ್ಕಾರ ಏಕೆ ನೋಡಿಕೊಳ್ಳಬೇಕು? ಅತಿ ಹೆಚ್ಚು ತೆರಿಗೆ ಕಟ್ಟುವವರು ಹಿಂದೂಗಳು. ಆದರೆ ಸೌಲಭ್ಯ ಮುಸ್ಲಿಮರಿಗೆ ಸಿಗುತ್ತಿದೆ. ಈ ಸತ್ಯ ಹೇಳಿದರೆ ಪ್ರಚೋದನೆ ಹೇಗಾಗುತ್ತದೆ? ನನ್ನ ಧ್ವನಿ ಅಡಗಿಸಬೇಕು ಎಂಬ ವ್ಯವಸ್ಥಿತ ಪ್ರಯತ್ನ ಕಳೆದ ೧೦ ವರ್ಷದಿಂದಲೂ ನಡೆದಿದೆ. ಆದರೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಿರಂತರ ಧ್ವನಿ ಎತ್ತುವೆ ಎಂದು ಹೇಳಿದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…