ಮೈಸೂರು

ರೈಲ್ವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ರೈಲ್ವೆ ಸಚಿವ ವಿ.ಸೋಮಣ್ಣ

ಮೈಸೂರು : ರೈಲ್ವೆ ಇಲಾಖೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯಬೇಕು. ಅದಕ್ಕೆ ಯಾವುದೇ ಸಹಕಾರ ಬೇಕಿದರೂ ಕೇಳಿ ನೀಡುತ್ತೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಮೈಸೂರಿನ ರೈಲ್ವೆ ಡಿಆರ್‌ಎಂ ಕಚೇರಿಯಲ್ಲಿ ಮೈಸೂರು ವಿಭಾಗೀಯ ರೈಲ್ವೆ ಪ್ರಬಂಧಕರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಮರ್ಶಾ ಸಭೆ ನಡೆಸಿ ಮೈಸೂರಿನ ವಿಭಾಗೀಯ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಆರ್‌ಎಂ ಮುದಿತ್ ಮಿಥಲ್ ಕಾಮಗಾರಿಗಳ ಬಗ್ಗೆ ವಿವರಿಸಿ, ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ೪೩೯.೩ ಕೋಟಿ ರೂ ವೆಚ್ಚದಲ್ಲಿ ಹೆಚ್ಚುವರಿಯಾಗಿ ಐದು ಪ್ಲಾಟ್ ಫಾರಂಗಳನ್ನ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ ಸಬ್ ವೇ, ಸ್ಕೈವಾಕ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮಾಡಿಕೊಡಲಾಗುತ್ತದೆ. ಸಿಬ್ಬಂದಿಗಳ ಕ್ವಾರ್ಟಸ್ ನಿರ್ಮಾಣ ಮಾಡಲಾಗುತ್ತಿದೆ ಅದರ ಕಾಮಗಾರಿ ಪ್ರಗತಿಯಲ್ಲಿದೆ. ಮತ್ತೊಂದೆಡೆ ನಾಗನಹಳ್ಳಿ ಯಾರ್ಡ್‌ಗಾಗಿ ೮ ಎಕರೆ ೨೯ಕುಂಟೆ ಜಾಗವನ್ನು ಪತ್ತೆ ಮಾಡಲಾಗಿದೆ. ಆದರೆ ಅದಕ್ಕೆ ಭೂ ಸ್ವಾಧೀನದ ತೊಡಕು ಉಂಟಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು.

ಬಳಿಕ ಮಾತನಾಡಿದ ಸಚಿವರು, ರೈಲ್ವೆ ಕ್ವಾರ್ಟಸ್‌ಗೆ ಪ್ರಧಾನ ಮಂತ್ರಿಗಳು ಚಾಲನೆ ನೀಡಿದ್ದು ಇನ್ನೂ ಏಕೆ ಕಾಮಗಾರಿ ತಡವಾಗಿದೆ? ಶೀಘ್ರವಾಗಿ ಕಾಮಗಾರಿ ಮುಗಿಸಿ, ಭೂ ಸ್ವಾಧೀನದ ವಿಚಾರವಾಗಿ ನಾನು ಕರ್ನಾಟಕ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ರೈಲ್ವೆ ಇಲಾಖೆ ಸಂಬಂಧಿಸಿದಂತೆ ಎಲ್ಲಾ ಕೆಲಸಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಜೋಡಿಸಿ ಸಹಕಾರ ನೀಡುತ್ತಿದ್ದಾರೆ. ಪ್ರದಾನಮಂತ್ರಿ ಮೋದಿ ಅವರಿಗೆ ರೈಲ್ವೆ ಇಲಾಖೆ ಬಗ್ಗೆ ಸಾಕಷ್ಟು ದೂರ ದೃಷ್ಟಿ ಇದ್ದು, ಇಲಾಖೆ ವತಿಯಿಂದ ೩೯ ಸಾವಿರ ಕೋಟಿ ರೂ. ವೆಚ್ಚದ ೧೩ ಯೋಜನೆ ನಡೆಯುತ್ತಿದೆ. ಪ್ರಮುಖವಾಗಿ ರಾಯದುರ್ಗ ಮತ್ತು ತುಮಕೂರು, ತುಮಕೂರು ಮತ್ತು ದಾವಣಗೆರೆ, ಕುಡುಚಿ ಮತ್ತು ಗದಗ ಸೇರಿದಂತೆ ಅನೇಕ ಯೋಜನೆಗಳು ನಡೆಯುತ್ತಿವೆ. ೨೫ ವರ್ಷಗಳಿಂದ ಹಿಂದೆ ಉಳಿದ್ದಿರುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ತುಮಕೂರಿನಲ್ಲಿ ವಿಕಸಿತ ಭಾರತದಡಿ ಗ್ರೀನ್ ಕಾರಿಡಾರ್ ಮಾಡುತ್ತಿದ್ದೇವೆ. ಎಲ್ಲಿ ಕಾರ್ಖಾನೆಗಳಿವೆ ಅಲ್ಲಿ ರೈಲ್ವೆ ಹಳಿಗಳನ್ನು ಅಳವಡಿಸಿ ಗೂಡ್ಸ್ ಟ್ರಾಸ್ ಪೋರ್ಟ್‌ಟೆಷನ್‌ಗೆ ಒತ್ತು ನೀಡಲಾಗುತ್ತಿದೆ. ಇದ್ದರಿಂದ ಟ್ರಾಸ್ ಪೋರ್ಟ್‌ಟೆಷನ್ ವೆಚ್ಚವೂ ಕಡಿಮೆ ಆಗಲಿದೆ. ೪೦ ವರ್ಷ ಇಲ್ಲಿ ಏನು ಸೇವೆ ಮಾಡಿದ್ದೆ ಅದನ್ನು ಕೇವಲ ೧.೫ ವರ್ಷದಲ್ಲಿ ಸೇದ ಸೇವೆ ಮಾಡಿದ್ದೇನೆ. ದೇಶದ ಅಭಿವೃದ್ದಿಯ ಸಂಕೇತ ರೈಲ್ವೆ ಎಂಬುದನ್ನು ತೋರಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ಚಾಮರಾಜನಗರ-ಹೆಜ್ಜಾಲ, ಮೈಸೂರು-ಕುಶಾಲನಗರದ ಕಾಮಗಾರಿಗೆ ಒತ್ತಾಯ
ಚಾಮರಾಜನಗರ ಹೆಜ್ಜಾಲ, ಮೈಸೂರು ಕುಶಾಲನಗರದ ಮಾರ್ಗದ ಕಾಮಗಾರಿ ಮಾಡಲು ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ, ನಾನು ಪತ್ರ ಬರೆದು ಒತ್ತಡ ಹಾಕಿದ್ದೇನೆ. ಚಾಮರಾಜನಗರದ ಸಂಸದ ಸುನೀಲ್ ಬೋಸ್ ಹಾಗೂ ಅವರ ತಂದೆ ಡಾ.ಹೆಚ್.ಸಿ.ಮಹದೇವಪ್ಪನಿಗೂ ಹೇಳಿದೆ ಏನೂ ಪ್ರಯೋಜನವಾಗಿಲ್ಲ. ೧೫ ದಿನದೊಳಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

1 hour ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

1 hour ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

2 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

3 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago