ಮೈಸೂರು

ಮೈಸೂರಿನಲ್ಲಿ ಮತ್ಸ್ಯಗಾರ (ಅಕ್ವೇರಿಯಂ) ನಿರ್ಮಾಣಕ್ಕೆ ತೀರ್ಮಾನ

ಮೈಸೂರು : ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಸ್ಯಗಾರ(ಅಕ್ವೇರಿಯಂ) ನಿರ್ಮಾಣ ಮಾಡಲು ಯೋಜನಾ ವರದಿ ನೀಡಲು ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

12 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

13 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

13 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

13 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

15 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

15 hours ago