ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದ) ಮೈಸೂರು ಜಿಲ್ಲಾ ಸಮಿತಿಯಿಂದ ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸರ್ಯ ಮಾತನಾಡಿ, ಬೊಲಿವೇರಿಯನ್ ರಿಪಬ್ಲಿಕ್ ಆಫ್ ವೆನೆಜುವೆಲಾದ ವಿರುದ್ಧ ಯುನೈಟೆಡ್ ಸ್ಟೇಟ್ಸ್ ಸರ್ಕಾರವು ನಡೆಸುತ್ತಿರುವ ಮಿಲಿಟರಿ ಆಕ್ರಮಣ ಮತ್ತು ಬಾಂಬ್ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಗಣರಾಜ್ಯದ ರಾಜಧಾನಿ ಕ್ಯಾರಕಾಸ್ ನಗರದ ನಾಗರಿಕ ಮತ್ತು ಮಿಲಿಟರಿ ಜಿಲ್ಲೆಗಳು ಮತ್ತು ಮಿರಾಂಡಾ, ಅರಾಗುವಾ ಮತ್ತು ಲಾ ಗುವೈರಾ ರಾಜ್ಯಗಳ ಮೇಲೆ ಸ್ಫೋಟಗಳು ಮತ್ತು ವೈಮಾನಿಕ ದಾಳಿ ನಡೆಸಿ ವೆನೆಜುವೆಲಾ ಅಧ್ಯಕ್ಷರ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕ ಪಡೆಗಳು ಸೆರೆಹಿಡಿದು ದೇಶದಿಂದ ಹೊರಗೆ ಕರೆದೊಯ್ದ ಅಮೆರಿಕ ಅಧ್ಯಕ್ಷ ಟ್ರಂಪ್ ನಡೆಯನ್ನು ಖಂಡಿಸಿದರು.
ವೆನೆಜುವೆಲಾದ ನೆಲದ ಮೇಲೆ ಅಮೇರಿಕಾ ಮಿಲಿಟರಿ ದಾಳಿಯನ್ನು ನಡೆಸಿದೆ. ಕರಾವಳಿ ಬಂದರಿನ ಮೇಲೆ ಸಿಐಎ ನೇತೃತ್ವದ ಡ್ರೋನ್ ದಾಳಿಯೂ ಸೇರಿದೆ. ಅಮೇರಿಕಾ ತೀವ್ರವಾದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರಿಂದ ಹೊರಬರಲು ಈ ದಾಳಿ ನಡೆಸಿದೆ. ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ವಿಶ್ವದ ಅತಿದೊಡ್ಡ ತೈಲ ನಿಕ್ಷೇಪಗಳು, ವ್ಯಾಪಕವಾದ ಅನಿಲ ಕ್ಷೇತ್ರಗಳು, ಗಮನಾರ್ಹ ಚಿನ್ನದ ಮೀಸಲು ಹೊಂದಿದೆ ಇದರ ಮೇಲೆ ತನ್ನ ಹಿಡಿತ ಸಾಧಿಸಲು ಸ್ವತಂತ್ರ ಸಾರ್ವಭೌಮ ದೇಶದ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು.
ಅಮೆರಿಕ ಪರವಾಗಿ ಯಾವ ದೇಶ ಇರುವುದಿಲ್ಲವೋ ಅಂತಹ ದೇಶಗಳ ಮೇಲೆ ದಾಳಿಯನ್ನು ನಡೆಸುತ್ತಾ ಬರುತ್ತಿದೆ. ಅಮೇರಿಕಾದ ಈ ಸಾಮ್ರಾಜ್ಯಶಾಹಿ ನಡೆಯನ್ನು ಖಂಡಿಸಬೇಕಿದೆ ಎಂದರು.
ಜಿಲ್ಲಾ ಸಮಿತಿ ಸದಸ್ಯರಾದ ಎನ್.ವಿಜಯ್ಕುಮಾರ್, ಜಯರಾಂ, ಲೀಲಾವತಿ, ಸ್ಥಳೀಯ ಸಮಿತಿ ಕಾರ್ಯದರ್ಶಿ ಸುಬ್ರಹ್ಮಣ್ಯ, ಸದಸ್ಯರಾದ ರಾಜೇಂದ್ರ, ಅಣ್ಣಪ್ಪ, ಬಸವಯ್ಯ, ಬಾಲಾಜಿ ರಾವ್, ಬಲರಾಮ್, ಪ್ರಭಾರಕ್, ರಾಮಚಂದ್ರ, ನಾಗಣ್ಣ, ಬೀರೇಗೌಡ, ಮಹದೇವ ಸ್ವಾಮಿ, ಬಸವರಾಜ್, ಹಿರೇಮಠ್ ಮುಂತಾದವರು ಇದ್ದರು.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…