ಮೈಸೂರು

ಕನ್ನಡ ವೇದಿಕೆಯಿಂದ ಕೆ. ಶಿವರಾಂ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ !

ಮೈಸೂರು : ಕನ್ನಡ ವೇದಿಕೆ ವತಿಯಿಂದ ನಗರದ ಶಾಲೆಯ ಮಕ್ಕಳೊಂದಿಗೆ ಕೆ.ಶಿವರಾಂ ರವರಿಗೆ  ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು .
ಕಾರ್ಯಕ್ರಮ ಉದ್ದೇಶಿಸಿ ನಗರ ಪಾಲಿಕೆ ಸದಸ್ಯ  ಮಂಜುನಾಥ್  ಮಾತನಾಡಿ ಮೈಸೂರಿನ ನಗರದಲ್ಲಿ ಅವರು ಆಯುಕ್ತರಾಗಿ ಮೈಸೂರಿನ ಹಲವಾರು ಸೇವೆಗಳನ್ನು ಮಾಡಿದ್ದಾರೆ ಎಂದರು.
ಶೋಷಿತ ವರ್ಗದವರಿಗೆ ದೀನ ದಲಿತರಿಗೆ ಮೈಸೂರಿನ ಜಯನಗರ ಬಳಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ ಮತ್ತು ನೊಂದ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಪಾವತಿಸಿದ್ದಾರೆ ಹಾಗೂ ಬಿಡುವಿನ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಕೆಎ  ಎಸ್ ಮತ್ತು ಐಎಎಸ್ ತರಬೇತಿಯನ್ನು ಸಹ ನೀಡುತ್ತಿದ್ದರು.
ನಮ್ಮ ಹಾಗೆ ಓದಿದರೆ ನನ್ನಂತೆ ತಾವು ಸಹ ಅಧಿಕಾರಿಯಾಗುತ್ತಿರಿ ಎಂದು ತಿಳಿ ಹೇಳುತ್ತಿದ್ದರು ಸ್ವಯಂ ನಿವೃತ್ತಿ ಹೊಂದಮೇಲೆ ಸಿನಿಮಾ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದರು ಚಲವಾದಿ ಎಂಬ ಸಂಘಟನೆಯಿಂದ ಶೋಷಿತ ವರ್ಗದವರಿಗೆ ಮಾರ್ಗದರ್ಶಕರಾಗಿದ್ದರು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್ ಬಾಲಕೃಷ್ಣ ಅವರು ಮಾತನಾಡಿ, ಕನ್ನಡದಲ್ಲಿ ಪ್ರಥಮವಾಗಿ ಐಎಎಸ್ ಮಾಡಿದಂತ ಕೆ ಶಿವರಾಂ  ರವರು  ಇಂದು ನಮ್ಮನ್ನು ಅಗಲಿದ್ದಾರೆ.
ಆದರೆ ದೇಹ ಇಲ್ಲವಾದರೂ ಅವರ ವಿಚಾರಧಾರೆಗಳು ತಿಳಿದುಕೊಳ್ಳಲು ಸಾಕಷ್ಟು ಇವೆ ಅಂದಿನ ಕಾಲದಲ್ಲಿ ಕನ್ನಡವನ್ನು ನಿರ್ಲಕ್ಷಿಸುತ್ತಿರುವ ಸಮಯದಲ್ಲಿ ಛಲದಿಂದ ಕನ್ನಡ ಮಾತೃಭಾಷೆಯಲ್ಲಿ ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕರ್ನಾಟಕಕ್ಕೆ ಮಾದರಿಯಾದರು ಎಂದರು.
ಇವರ ಸಾಹಸಕ್ಕೆ ಮೆಚ್ಚಿ ಅಂದಿನ ಸಂಘ-ಸಂಸ್ಥೆಗಳು ಅಭಿನಂದಿಸಿದವು ಇವರಿಂದ ಪ್ರೇರಿತರಾದ ಎಷ್ಟೋ ಜನ ಕನ್ನಡದಲ್ಲಿ ಐಎಎಸ್ ಮಾಡಲು  ಪ್ರಾರಂಭಿಸಿದರು.
ಇವರು ಮೈಸೂರಿನಲ್ಲಿ ನಗರ ಪಾಲಿಕೆ ಆಯುಕ್ತರಾಗಿ ಮತ್ತು ಕನ್ನಡದಲ್ಲಿ ಬಾನಲ್ಲೆ ಮಧುಚಂದ್ರಕ್ಕೆ ಎಂಬ ಸಿನಿಮಾದಿಂದ ಜನರಿಗೆ ಪರಿಚಿತರಾಗಿ ಇವರಿಂದ ಸುಮಾರು ಸಮಾಜಸೇವೆ ಕಾರ್ಯಗಳು ನಡೆದವು.
ಈಗಲೂ ಮೈಸೂರಿನಲ್ಲಿ ಇವರನ್ನು ನೆನೆಯುತ್ತಾರೆ ಇಂಥ ಮಹಾವ್ಯಕ್ತಿಯು ನಮ್ಮನ್ನು ಅಗಲಿರುವುದು ದುಃಖಕರ ವಿಷಯವಾಗಿದೆ ಮೈಸೂರಿನಲ್ಲಿ ಇವರ ಹೆಸರು ಉಳಿಸುವಂತಹ ಯಾವುದಾದರೂ ಉದ್ಯಾನವನಕ್ಕೋ ಹೊಸ ಬಡವನೆಗಳಿಗೆ ಇವರ ಹೆಸರು ಇಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡ  ಪದಾಧಿಕಾರಿಗಳಾದ ಗೋಪಿ, ಪ್ಯಾಲೇಸ್ ಬಾಬು, ಅರವಿಂದ, ಗೋವಿಂದ್ ರಾಜ್, ಮದನ್, ಮಹೇಶ್ ಮಾಧ್ಯಮ ವಕ್ತಾರ ಮುಂತಾದವರು ಇದ್ದರು.
andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

9 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

9 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

10 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

10 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

10 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

11 hours ago