ಮೈಸೂರು

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಒತ್ತಾಯಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಡುವ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಕಟು ಮಾತುಗಳಿಂದ ಟೀಕಿಸಿದೆ. ಜನರಿಗೆ ಉದ್ಯೋಗ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಕಲ್ಪಿಸುವುದರಲ್ಲಿ ತಪ್ಪಿಲ್ಲ. ಆದರೆ, ಚುನಾವಣೆಯಲ್ಲಿ ಗೆಲ್ಲಲು ಉಚಿತ ಕೊಡುಗೆಗಳನ್ನು ನೀಡಬಾರದು. ಶ್ರೀಮಂತ-ಬಡವರ ನಡುವಿನ ಅಂತರ ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸುವ ಬದಲಿಗೆ ಯಾವುದೇ ಮಾನದಂಡವಿಲ್ಲದೆ ಕೊಡುಗೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ಯಾವುದೇ ಕೊಡುಗೆಗಳನ್ನು ನೀಡಬೇಕಾದರೆ ನಿರ್ದಿಷ್ಟ ಮಾನದಂಡಗಳು ಇರುತ್ತದೆ. ಪಿಂಚಣಿ ಪಡೆಯಲು ೬೫ ವರ್ಷ, ವಿಶೇಷಚೇತನರ ಪಿಂಚಣಿಗೆ ಶೇ.೭೦ರಷ್ಟು ದೈಹಿಕ ಅಂಗವಿಕಲತೆ ಇರಬೇಕು. ಅದೇ ರೀತಿ ಗ್ಯಾರಂಟಿಗಳಿಗೂ ಮಾನದಂಡ ಇಲ್ಲದೆ ಜನರ ತೆರಿಗೆಯ ದುಡ್ದನ್ನು ಪ್ರಚಾರಕ್ಕಾಗಿ, ಮತ ಗಳಿಸಲು ಕೊಡುವುದು ಸರೀನಾ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದರು.

ನಿಮಗೆ ನೀವೇ ಬೆನ್ನುತಟ್ಟಿಕೊಳ್ಳುವ ಕೆಲಸ
ರಾಜ್ಯದಲ್ಲಿ ನಾನೊಬ್ಬ ಆರ್ಥಿಕ ತಜ್ಞ. ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದೇನೆ. ಬೆಸ್ಟ್ ಹಣಕಾಸು ಮಂತ್ರಿ ಎನ್ನುವಂತೆ ನಿಮಗೆ ನೀವೇ ಬೆನ್ನು ತಟ್ಟಿಕೊಳ್ಳುವ ಕೆಲಸವನ್ನು ಬಿಡಬೇಕು. ಕರ್ನಾಟಕದ ಸಾಲವು ೭.೫೦ ಲಕ್ಷ ಕೋಟಿ ರೂ. ಇದ್ದು, ಸಿದ್ದರಾಮಯ್ಯ ಅವರೇ ೫ ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಸಿಎಂಗೆ ನಾಡಿನ ಇತಿಹಾಸ, ಚರಿತ್ರೆ ಗೊತ್ತಿಲ್ಲ. ಸ್ವಲ್ಪ ಹಿಂದಿನ ಹಣಕಾಸು ಸಚಿವರ ಕಾಲವನ್ನು ನೋಡಬೇಕು ಎಂದು ಟಾಂಗ್ ನೀಡಿದರು.

ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಿಕೊಡುವುದು ಇರಲಿ,ನಿಮಗೆ ತನುಮನ-ಧನ ಎರೆದಿರುವ ಕುರುಬ ಸಮಾಜಕ್ಕೆ ಯಾವ ಕಾರ್ಯಕ್ರಮ ಮಾಡಿದ್ದೀರಾ? ರಾಜ್ಯದಲ್ಲಿ ೧೦ ಲಕ್ಷ ಅಲೆಮಾರಿ ಕುರುಬರಿದ್ದಾರೆ. ೧.೨೫ ಕೋಟಿ ಕುರಿಗಳನ್ನು ಮೇಯಿಸುತ್ತಿದ್ದಾರೆ. ಅವರಿಗಾದರೂ ಏನು ಮಾಡಿಲ್ಲ. ಈ ಬಜೆಟ್‌ನಲ್ಲಾದರೂ ಕಾರ್ಯಕ್ರಮ ಕೊಡುವರೇ ಎಂಬುದನ್ನು ನೋಡೋಣ ಎಂದು ಹೇಳಿದರು.

ಹೈಕಮಾಂಡ್ ಅಂದರೆ ಸಿದ್ದರಾಮಯ್ಯ ಆಗಿದ್ದಾರೆ. ಈಗಿನ ಹೈಕಮಾಂಡ್ ಬಲಹೀನವಾಗಿದೆ. ಕರ್ನಾಟಕದಲ್ಲಿ ಉಂಟಾಗಿರುವ ಇಂದಿನ ಬೆಳವಣಿಗೆಗೆ ಸಿದ್ದರಾಮಯ್ಯ ಕಾರಣ ಎಂದ ಅವರು, ಮನ್ರೇಗಾ ಯೋಜನೆ ಹೆಸರು ಬದಲಿಸಿ ವಿಬಿ ಜಿ-ರಾಮ್ ಜಿ ಹೆಸರು ಬದಲಾವಣೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಕಾಲಾನುಕಾಲಕ್ಕೆ ಬದಲಾವಣೆ, ಮಾರ್ಪಾಡು ಮಾಡಬೇಕು. ರಾಷ್ಟ್ರಪತಿಗಳು ಅಂಕಿತವಾಗಿರುವ ಕಾಯ್ದೆ ಜಾರಿಗೆ ತರಬೇಕು. ಒಂದು ವೇಳೆ ಈ ಯೋಜನೆ ಜಾರಿಗೆ ತರದಿದ್ದರೆ ಪರ್ಯಾಯ ಕಾರ್ಯಕ್ರಮ ಯಾವುದು ಎಂಬುದನ್ನು ಹೇಳಲಿ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

25 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

6 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

6 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

6 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

6 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 hours ago