ಮೈಸೂರು

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಒತ್ತಾಯಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಡುವ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಕಟು ಮಾತುಗಳಿಂದ ಟೀಕಿಸಿದೆ. ಜನರಿಗೆ ಉದ್ಯೋಗ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಕಲ್ಪಿಸುವುದರಲ್ಲಿ ತಪ್ಪಿಲ್ಲ. ಆದರೆ, ಚುನಾವಣೆಯಲ್ಲಿ ಗೆಲ್ಲಲು ಉಚಿತ ಕೊಡುಗೆಗಳನ್ನು ನೀಡಬಾರದು. ಶ್ರೀಮಂತ-ಬಡವರ ನಡುವಿನ ಅಂತರ ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸುವ ಬದಲಿಗೆ ಯಾವುದೇ ಮಾನದಂಡವಿಲ್ಲದೆ ಕೊಡುಗೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ಯಾವುದೇ ಕೊಡುಗೆಗಳನ್ನು ನೀಡಬೇಕಾದರೆ ನಿರ್ದಿಷ್ಟ ಮಾನದಂಡಗಳು ಇರುತ್ತದೆ. ಪಿಂಚಣಿ ಪಡೆಯಲು ೬೫ ವರ್ಷ, ವಿಶೇಷಚೇತನರ ಪಿಂಚಣಿಗೆ ಶೇ.೭೦ರಷ್ಟು ದೈಹಿಕ ಅಂಗವಿಕಲತೆ ಇರಬೇಕು. ಅದೇ ರೀತಿ ಗ್ಯಾರಂಟಿಗಳಿಗೂ ಮಾನದಂಡ ಇಲ್ಲದೆ ಜನರ ತೆರಿಗೆಯ ದುಡ್ದನ್ನು ಪ್ರಚಾರಕ್ಕಾಗಿ, ಮತ ಗಳಿಸಲು ಕೊಡುವುದು ಸರೀನಾ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದರು.

ನಿಮಗೆ ನೀವೇ ಬೆನ್ನುತಟ್ಟಿಕೊಳ್ಳುವ ಕೆಲಸ
ರಾಜ್ಯದಲ್ಲಿ ನಾನೊಬ್ಬ ಆರ್ಥಿಕ ತಜ್ಞ. ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದೇನೆ. ಬೆಸ್ಟ್ ಹಣಕಾಸು ಮಂತ್ರಿ ಎನ್ನುವಂತೆ ನಿಮಗೆ ನೀವೇ ಬೆನ್ನು ತಟ್ಟಿಕೊಳ್ಳುವ ಕೆಲಸವನ್ನು ಬಿಡಬೇಕು. ಕರ್ನಾಟಕದ ಸಾಲವು ೭.೫೦ ಲಕ್ಷ ಕೋಟಿ ರೂ. ಇದ್ದು, ಸಿದ್ದರಾಮಯ್ಯ ಅವರೇ ೫ ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಸಿಎಂಗೆ ನಾಡಿನ ಇತಿಹಾಸ, ಚರಿತ್ರೆ ಗೊತ್ತಿಲ್ಲ. ಸ್ವಲ್ಪ ಹಿಂದಿನ ಹಣಕಾಸು ಸಚಿವರ ಕಾಲವನ್ನು ನೋಡಬೇಕು ಎಂದು ಟಾಂಗ್ ನೀಡಿದರು.

ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಿಕೊಡುವುದು ಇರಲಿ,ನಿಮಗೆ ತನುಮನ-ಧನ ಎರೆದಿರುವ ಕುರುಬ ಸಮಾಜಕ್ಕೆ ಯಾವ ಕಾರ್ಯಕ್ರಮ ಮಾಡಿದ್ದೀರಾ? ರಾಜ್ಯದಲ್ಲಿ ೧೦ ಲಕ್ಷ ಅಲೆಮಾರಿ ಕುರುಬರಿದ್ದಾರೆ. ೧.೨೫ ಕೋಟಿ ಕುರಿಗಳನ್ನು ಮೇಯಿಸುತ್ತಿದ್ದಾರೆ. ಅವರಿಗಾದರೂ ಏನು ಮಾಡಿಲ್ಲ. ಈ ಬಜೆಟ್‌ನಲ್ಲಾದರೂ ಕಾರ್ಯಕ್ರಮ ಕೊಡುವರೇ ಎಂಬುದನ್ನು ನೋಡೋಣ ಎಂದು ಹೇಳಿದರು.

ಹೈಕಮಾಂಡ್ ಅಂದರೆ ಸಿದ್ದರಾಮಯ್ಯ ಆಗಿದ್ದಾರೆ. ಈಗಿನ ಹೈಕಮಾಂಡ್ ಬಲಹೀನವಾಗಿದೆ. ಕರ್ನಾಟಕದಲ್ಲಿ ಉಂಟಾಗಿರುವ ಇಂದಿನ ಬೆಳವಣಿಗೆಗೆ ಸಿದ್ದರಾಮಯ್ಯ ಕಾರಣ ಎಂದ ಅವರು, ಮನ್ರೇಗಾ ಯೋಜನೆ ಹೆಸರು ಬದಲಿಸಿ ವಿಬಿ ಜಿ-ರಾಮ್ ಜಿ ಹೆಸರು ಬದಲಾವಣೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಕಾಲಾನುಕಾಲಕ್ಕೆ ಬದಲಾವಣೆ, ಮಾರ್ಪಾಡು ಮಾಡಬೇಕು. ರಾಷ್ಟ್ರಪತಿಗಳು ಅಂಕಿತವಾಗಿರುವ ಕಾಯ್ದೆ ಜಾರಿಗೆ ತರಬೇಕು. ಒಂದು ವೇಳೆ ಈ ಯೋಜನೆ ಜಾರಿಗೆ ತರದಿದ್ದರೆ ಪರ್ಯಾಯ ಕಾರ್ಯಕ್ರಮ ಯಾವುದು ಎಂಬುದನ್ನು ಹೇಳಲಿ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago