ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾದ ಪ್ರೊ. ಎಂ.ಜಿ. ಮಂಜುನಾಥ್ ಅಭಿಪ್ರಾಯಪಟ್ಟರು.
ಇಂದು(ಜ.2) ನಗರದ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಯುಜಿಸಿ ನೆಟ್ ಪರೀಕ್ಷಾ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶುಭ ಹಾರೈಕೆ ಮಾಡಿ ಅವರು ಮಾತನಾಡಿದರು.
1996 ರಲ್ಲಿ ಯುಜಿಸಿ ಪರೀಕ್ಷೆ ಆರಂಭವಾಗಿದ್ದು, ನಾನು ಕೂಡ ಪರೀಕ್ಷೆ ಎದುರಿಸಿ ಅಧ್ಯಾಪಕನಾಗಿ ಆಯ್ಕೆಯಾದೆ. ಯುಜಿಸಿ ನೆಟ್ ಪರೀಕ್ಷೆಯ ಗುಟ್ಟು ಹಳೆಯ ಪ್ರಶ್ನೆಗಳನ್ನು ಆಗಾಗ್ಗೆ ತಿರುವು ಹಾಕಿ. ಮೊದಲು ಸುಲಭದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋದರೆ ಸಮಯದ ಮಿತಿಯ ನಡುವೆ ಅತಿ ಹೆಚ್ಚು ಪ್ರಶ್ನೆಗೆ ಉತ್ತರಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಯುಜಿಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕ ಬಂದರೆ ಪ್ರತಿ ತಿಂಗಳು ಸುಮಾರು ೪೦ಸಾವಿರ ಯುಜಿಸಿ ಶಿಷ್ಯವೇತನ ಐದು ವರ್ಷಗಳ ಕಾಲ ಸಿಗಲಿದೆ. ಈ ಹೊತ್ತು ಯಾವುದೇ ಕೆಲಸಕ್ಕೂ ಇಷ್ಟೊಂದು ಮೊತ್ತದ ಸಂಬಳ ಸಿಗುವುದಿಲ್ಲ. ಇದೇ ಸಮಯದಲ್ಲಿ ಪಿಎಚ್ಡಿ ಅಧ್ಯಯನದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸಬಹುದು ಎಂದರು.
ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಮೈಸೂರು ವಿವಿ ಸಿಂಡಿಕೇಟ್ ಸದಸ್ಯೆ ಡಾ. ಬಿ.ಆರ್. ಜಯಕುಮಾರಿ ಯುಜಿಸಿ ನೆಟ್ ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಸಂಪತ್ತನ್ನು ನಾವು ಕಾಪಾಡಬೇಕು ಆದರೆ ವಿದ್ಯೆ ನಮ್ಮನ್ನು ಕಾಪಾಡುತ್ತದೆ. ಸಂಪತ್ತನ್ನು ಅಪಹರಿಸಬಹುದು ಆದರೆ ಜ್ಞಾನವನ್ನು ಕದಿಯಲು ಸಾಧ್ಯವಿಲ್ಲ. ನಮ್ಮ ಒಳಗಿರುವ ಶಕ್ತಿ ಮತ್ತು ಸಾಮರ್ಥ್ಯವನ್ನು ಹೊರಗೆ ತರಲು ಸ್ಪರ್ಧೆ ಇರಬೇಕು. ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅಂತಹ ಕೆಲಸವನ್ನು ಮಾಡುತ್ತವೆ. ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಇದ್ದರೆ ಪ್ರತಿಫಲವಾಗಿ ಯಶಸ್ಸು ಸಿಗುವುದರಲ್ಲಿ ಯಾವುದೇ ಅನುಮಾನ ಬೇಡ. ಮನಸ್ಸು ಮಾಡಿ, ಕರ್ತವ್ಯನಿಷ್ಠರಾಗಿ, ಕಾದು ನೋಡಿ ಎಂಬ ಮಾತಿನಲ್ಲಿ ಸದಾ ನಂಬಿಕೆಯಿಟ್ಟು ಕೆಲಸಮಾಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಹಕಾರಿಗಳಾದ ವೈ.ಎನ್. ಶಂಕರೇಗೌಡ ಮಾತನಾಡಿ, ಆಸಕ್ತಿ ಮತ್ತು ಕಠಿಣ ಪರಿಶ್ರಮ ಎರಡೂ ಸೇರಿದರೆ ಮಾತ್ರ ಗೆಲುವು ನಿಮ್ಮದಾಗುತ್ತದೆ. ಶಿಕ್ಷಕ ವೃತ್ತಿಯನ್ನು ಆಯ್ದಕೊಂಡು ಹೊರಟಿರುವ ನಿಮಗೆ ಶುಭವಾಗಲಿ ಎಂದರು.
ಸಮಾರಂಭದಲ್ಲಿ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಆರ್. ಎನ್. ಪದ್ಮನಾಭ, ಶಿಕ್ಷಣ ತಜ್ಞ ಪ್ರೊ. ಎಚ್. ಎಸ್. ಮಲ್ಲಿಕಾರ್ಜುನಶಾಸ್ತ್ರಿ, ಪ್ರೊ. ವಿ. ಜಯಪ್ರಕಾಶ್, ಪ್ರೊ. ಕೃ.ಪ. ಗಣೇಶ, ಜೈನಹಳ್ಳಿ ಸತ್ಯನಾರಾಯಣಗೌಡ, ಕಾರ್ಯದರ್ಶಿ ಎಚ್. ಬಾಲಕೃಷ್ಣ, ಕೆ.ವೈ.ನಾಗೇಂದ್ರ, ಕಿರಣ್ ಕೌಶಿಕ್, ಯು.ಎಂ. ಶರದ್ ರಾವ್, ಪ್ರೊ. ಎಚ್.ಆರ್. ತಿಮ್ಮೇಗೌಡ, ಡಾ. ಎಸ್.ಬಿ.ಎಂ. ಪ್ರಸನ್ನ, ರೋಹನ್ ರವಿಕುಮಾರ್ ಉಪಸ್ಥಿತರಿದ್ದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…