ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು ಹಾಗೂ ಮುಖಂಡರ ಜೊತೆ ಗ್ರಾಮದ ಜನರನ್ನು ಭೇಟಿ ಮಾಡಿ ಈ ಬಾರಿ ಕಾಂಗ್ರೆಸ್ಗೆ ಮತ ಹಾಕುವಂತೆ ಮನವಿ ಮಾಡಿದರು.
ಮತದಾನ ಮಾಡುವಂತೆ ಮನವಿ ಮಾಡಿ ಮಾತನಾಡಿದ ಕಾಂಗ್ರೆಸ್ ಅಬ್ಯರ್ಥಿ ಸುನೀಲ್ ಬೋಸ್, ತಂದೆಯವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ನನಗೂ ಇಷ್ಟು ದಿನ ಕ್ಷೇತ್ರದೆಲ್ಲೆಡೆ ಹೆಚ್ಚಿನ ಪ್ರೀತಿ, ವಿಶ್ವಾಸ ತೋರಿಸಿದ್ದೀರಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ನೀಡಿದ್ದ ಮತಕ್ಕಿಂತ ಹೆಚ್ಚಿನ ಮತ ನನಗೆ ನೀಡಿ ಗೆಲ್ಲಿಸಬೇಕು ಎಂದು ಕೋರಿದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…