ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು ಹಾಗೂ ಮುಖಂಡರ ಜೊತೆ ಗ್ರಾಮದ ಜನರನ್ನು ಭೇಟಿ ಮಾಡಿ ಈ ಬಾರಿ ಕಾಂಗ್ರೆಸ್ಗೆ ಮತ ಹಾಕುವಂತೆ ಮನವಿ ಮಾಡಿದರು.
ಮತದಾನ ಮಾಡುವಂತೆ ಮನವಿ ಮಾಡಿ ಮಾತನಾಡಿದ ಕಾಂಗ್ರೆಸ್ ಅಬ್ಯರ್ಥಿ ಸುನೀಲ್ ಬೋಸ್, ತಂದೆಯವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ನನಗೂ ಇಷ್ಟು ದಿನ ಕ್ಷೇತ್ರದೆಲ್ಲೆಡೆ ಹೆಚ್ಚಿನ ಪ್ರೀತಿ, ವಿಶ್ವಾಸ ತೋರಿಸಿದ್ದೀರಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ನೀಡಿದ್ದ ಮತಕ್ಕಿಂತ ಹೆಚ್ಚಿನ ಮತ ನನಗೆ ನೀಡಿ ಗೆಲ್ಲಿಸಬೇಕು ಎಂದು ಕೋರಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…