ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು ಹಾಗೂ ಮುಖಂಡರ ಜೊತೆ ಗ್ರಾಮದ ಜನರನ್ನು ಭೇಟಿ ಮಾಡಿ ಈ ಬಾರಿ ಕಾಂಗ್ರೆಸ್ಗೆ ಮತ ಹಾಕುವಂತೆ ಮನವಿ ಮಾಡಿದರು.
ಮತದಾನ ಮಾಡುವಂತೆ ಮನವಿ ಮಾಡಿ ಮಾತನಾಡಿದ ಕಾಂಗ್ರೆಸ್ ಅಬ್ಯರ್ಥಿ ಸುನೀಲ್ ಬೋಸ್, ತಂದೆಯವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ನನಗೂ ಇಷ್ಟು ದಿನ ಕ್ಷೇತ್ರದೆಲ್ಲೆಡೆ ಹೆಚ್ಚಿನ ಪ್ರೀತಿ, ವಿಶ್ವಾಸ ತೋರಿಸಿದ್ದೀರಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ನೀಡಿದ್ದ ಮತಕ್ಕಿಂತ ಹೆಚ್ಚಿನ ಮತ ನನಗೆ ನೀಡಿ ಗೆಲ್ಲಿಸಬೇಕು ಎಂದು ಕೋರಿದರು.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…