ಮೈಸೂರು

ಬಿಜೆಪಿ ಅಭ್ಯರ್ಥಿ ಯದುವೀರ್‌ ವಿರುದ್ಧ ಕಾಂಗ್ರೆಸ್‌ ದೂರು

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್‌ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್‌ ಬಾಬು ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್‌ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಅನೇಕ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್‌ ಚುನಾವಣಾ ಪಾರದರ್ಶಕತೆಗೆ ಅಪಾಯವನ್ನುಂಟು ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಮ್ಮ ಪ್ರಚಾರಕ್ಕೆ ಬೆಂಬಲ ಕೊರುವ ಸಭೆಯಲ್ಲಿ ನೋಟ್‌ಬುಕ್‌, ಪೆನ್‌, ಚಾಕೊಲೇಟ್‌ ಹಾಗೂ ಸೀರೆ ಸೇರಿದಂತೆ ಸಿಹಿತಿನಿಸುಗಳನ್ನು ನೀಡಿ ಸೋಶಿಯಲ್‌ ಮೀಡಿಯಾದ ಪ್ರಭಾವಿಗಳಿಗೆ ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ದೂರಿನಲ್ಲಿ ಆರೋಪಿಸಿದೆ.

ಮತದಾರರ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನಲೆ ಯದುವೀರ್‌ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

1 hour ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

1 hour ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

2 hours ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

2 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

3 hours ago