ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಅನೇಕ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಯದುವೀರ್ ಚುನಾವಣಾ ಪಾರದರ್ಶಕತೆಗೆ ಅಪಾಯವನ್ನುಂಟು ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಮ್ಮ ಪ್ರಚಾರಕ್ಕೆ ಬೆಂಬಲ ಕೊರುವ ಸಭೆಯಲ್ಲಿ ನೋಟ್ಬುಕ್, ಪೆನ್, ಚಾಕೊಲೇಟ್ ಹಾಗೂ ಸೀರೆ ಸೇರಿದಂತೆ ಸಿಹಿತಿನಿಸುಗಳನ್ನು ನೀಡಿ ಸೋಶಿಯಲ್ ಮೀಡಿಯಾದ ಪ್ರಭಾವಿಗಳಿಗೆ ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.
ಮತದಾರರ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನಲೆ ಯದುವೀರ್ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…