ಮೈಸೂರು

ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ಮನೆ ಮನೆಗೆ ತಲುಪಿಸಲಾಗುವುದು : ಡಾ.ಪುಷ್ಪಾ ಅಮರನಾಥ್

ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ನ್ಯಾಯಗಳೊಂದಿಗೆ ೨೫ ಕಾರ್ಯಕ್ರಮಗಳನ್ನು ಒಳಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಅನ್ನು ಪ್ರತಿಯೊಬ್ಬರಿಗೂ ತಲುಪಿಸುತ್ತೇವೆ.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ ಮತ್ತು ಪಾಲುದಾರಿಕೆಯ ನ್ಯಾಯವನ್ನು ಜಾರಿ ಮಾಡಲಿದ್ದೇವೆ.

ಯುವಜನರಿಗೆ ಉದ್ಯೋಗ ಖಾತರಿ, ಮಹಾಲಕ್ಷ್ಮೀ ಯೋಜನೆಯ ಮೂಲಕ ಕುಟುಂಬಕ್ಕೆ ೧ ಲಕ್ಷ ರೂ., ಎಂಎಸ್‌ಪಿ ಜಾರಿ, ಕೃಷಿಯಿಂದ ಜಿಎಸ್‌ಟಿ ತೆಗೆಯುವ ಶಪಥ ಮಾಡಿದ್ದೇವೆ. ದೇಶಾದ್ಯಂತ ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದರು.

೧೦ ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಕೊಟ್ಟ ಯಾವ ಗ್ಯಾರಂಟಿಯನ್ನೂ ಈಡೇರಿಸಿಲ್ಲ. ವರ್ಷಕ್ಕೆ ೨ ಕೋಟಿ ಉದ್ಯೋಗ ನೀಡಿತೆ? ರೈತರ ಆದಾಯ ದ್ವಿಗುಣವಾಯಿತೇ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ರೂ. ಹಣ ಬಂದಿದೆಯೆ? ಉಜ್ವಲ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲಾಯಿತು. ಬಿಜೆಪಿಯವರದು ಬರೀ ಸುಳ್ಳಿನ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ, ಜಾ.ದಳದ ಅಸಲಿ ಮುಖ ಜನತೆಗೆ ಈಗ ಗೊತ್ತಾಗಿದೆ. ಯಾವುದೇ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ-ಜಾ.ದಳ ಮೈತ್ರಿಯನ್ನು ಬೆಂಬಲಿಸುವುದಿಲ್ಲ. ಮೈತ್ರಿ ಬೆಂಬಲಿಸುವ ಮುಸ್ಲಿಮರಿಗೆ ಈಗ ತಿಳಿವಳಿಕೆ ಬರುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರುಣ್‌ಕುಮಾರ್, ಮಾಜಿ ಮಹಾಪೌರರಾದ ಮೋದಾಮಣಿ, ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಪುಷ್ಪವಲ್ಲಿ, ಕೈಸರ್ ಮತ್ತಿತರರು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

3 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

3 hours ago