ಮೈಸೂರು

ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ಮನೆ ಮನೆಗೆ ತಲುಪಿಸಲಾಗುವುದು : ಡಾ.ಪುಷ್ಪಾ ಅಮರನಾಥ್

ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ನ್ಯಾಯಗಳೊಂದಿಗೆ ೨೫ ಕಾರ್ಯಕ್ರಮಗಳನ್ನು ಒಳಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಅನ್ನು ಪ್ರತಿಯೊಬ್ಬರಿಗೂ ತಲುಪಿಸುತ್ತೇವೆ.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ ಮತ್ತು ಪಾಲುದಾರಿಕೆಯ ನ್ಯಾಯವನ್ನು ಜಾರಿ ಮಾಡಲಿದ್ದೇವೆ.

ಯುವಜನರಿಗೆ ಉದ್ಯೋಗ ಖಾತರಿ, ಮಹಾಲಕ್ಷ್ಮೀ ಯೋಜನೆಯ ಮೂಲಕ ಕುಟುಂಬಕ್ಕೆ ೧ ಲಕ್ಷ ರೂ., ಎಂಎಸ್‌ಪಿ ಜಾರಿ, ಕೃಷಿಯಿಂದ ಜಿಎಸ್‌ಟಿ ತೆಗೆಯುವ ಶಪಥ ಮಾಡಿದ್ದೇವೆ. ದೇಶಾದ್ಯಂತ ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದರು.

೧೦ ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಕೊಟ್ಟ ಯಾವ ಗ್ಯಾರಂಟಿಯನ್ನೂ ಈಡೇರಿಸಿಲ್ಲ. ವರ್ಷಕ್ಕೆ ೨ ಕೋಟಿ ಉದ್ಯೋಗ ನೀಡಿತೆ? ರೈತರ ಆದಾಯ ದ್ವಿಗುಣವಾಯಿತೇ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ರೂ. ಹಣ ಬಂದಿದೆಯೆ? ಉಜ್ವಲ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲಾಯಿತು. ಬಿಜೆಪಿಯವರದು ಬರೀ ಸುಳ್ಳಿನ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ, ಜಾ.ದಳದ ಅಸಲಿ ಮುಖ ಜನತೆಗೆ ಈಗ ಗೊತ್ತಾಗಿದೆ. ಯಾವುದೇ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ-ಜಾ.ದಳ ಮೈತ್ರಿಯನ್ನು ಬೆಂಬಲಿಸುವುದಿಲ್ಲ. ಮೈತ್ರಿ ಬೆಂಬಲಿಸುವ ಮುಸ್ಲಿಮರಿಗೆ ಈಗ ತಿಳಿವಳಿಕೆ ಬರುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರುಣ್‌ಕುಮಾರ್, ಮಾಜಿ ಮಹಾಪೌರರಾದ ಮೋದಾಮಣಿ, ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಪುಷ್ಪವಲ್ಲಿ, ಕೈಸರ್ ಮತ್ತಿತರರು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago