ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ನ್ಯಾಯಗಳೊಂದಿಗೆ ೨೫ ಕಾರ್ಯಕ್ರಮಗಳನ್ನು ಒಳಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಅನ್ನು ಪ್ರತಿಯೊಬ್ಬರಿಗೂ ತಲುಪಿಸುತ್ತೇವೆ.
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ ಮತ್ತು ಪಾಲುದಾರಿಕೆಯ ನ್ಯಾಯವನ್ನು ಜಾರಿ ಮಾಡಲಿದ್ದೇವೆ.
ಯುವಜನರಿಗೆ ಉದ್ಯೋಗ ಖಾತರಿ, ಮಹಾಲಕ್ಷ್ಮೀ ಯೋಜನೆಯ ಮೂಲಕ ಕುಟುಂಬಕ್ಕೆ ೧ ಲಕ್ಷ ರೂ., ಎಂಎಸ್ಪಿ ಜಾರಿ, ಕೃಷಿಯಿಂದ ಜಿಎಸ್ಟಿ ತೆಗೆಯುವ ಶಪಥ ಮಾಡಿದ್ದೇವೆ. ದೇಶಾದ್ಯಂತ ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದರು.
೧೦ ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಕೊಟ್ಟ ಯಾವ ಗ್ಯಾರಂಟಿಯನ್ನೂ ಈಡೇರಿಸಿಲ್ಲ. ವರ್ಷಕ್ಕೆ ೨ ಕೋಟಿ ಉದ್ಯೋಗ ನೀಡಿತೆ? ರೈತರ ಆದಾಯ ದ್ವಿಗುಣವಾಯಿತೇ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ರೂ. ಹಣ ಬಂದಿದೆಯೆ? ಉಜ್ವಲ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲಾಯಿತು. ಬಿಜೆಪಿಯವರದು ಬರೀ ಸುಳ್ಳಿನ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ, ಜಾ.ದಳದ ಅಸಲಿ ಮುಖ ಜನತೆಗೆ ಈಗ ಗೊತ್ತಾಗಿದೆ. ಯಾವುದೇ ಅಲ್ಪಸಂಖ್ಯಾತ ಮುಖಂಡರು ಬಿಜೆಪಿ-ಜಾ.ದಳ ಮೈತ್ರಿಯನ್ನು ಬೆಂಬಲಿಸುವುದಿಲ್ಲ. ಮೈತ್ರಿ ಬೆಂಬಲಿಸುವ ಮುಸ್ಲಿಮರಿಗೆ ಈಗ ತಿಳಿವಳಿಕೆ ಬರುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರುಣ್ಕುಮಾರ್, ಮಾಜಿ ಮಹಾಪೌರರಾದ ಮೋದಾಮಣಿ, ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಪುಷ್ಪವಲ್ಲಿ, ಕೈಸರ್ ಮತ್ತಿತರರು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…