ಮೈಸೂರು

ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ಹಲವಾರು ಅನುಕೂಲಗಳಾಗಿದ್ದು, ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಪ್ರಾಯಪಟ್ಟರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ಚುನಾವಣೆ ಎದುರಿಸಿ ಅಧಿಕಾರಕ್ಕೆ ಬಂದಿರುವುದೇ ಗ್ಯಾರೆಂಟಿ ಆಧಾರದ ಮೇಲೆ. ಅವುಗಳು ಮುಂದುವರೆಯಬೇಕು. ಆದರೆ ಈ ವಿಷಯದಲ್ಲಿ ತೀರ್ಮಾ ಕೈಗೊಳ್ಳುವುದು ಅವರ ಪಕ್ಷದವರಿಗೆ ಸೇರಿದ್ದಾಗಿದೆ ಎಂದು ಯದುವೀರ್‌ ಹೇಳಿದರು.

ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳ ನೆಲಸಮಗೊಳಿಸುವ ಸಂಬಂಧ ಮೈಸೂರಿನಲ್ಲಿರುವ ದೇವರಾಜ ಮರುಕಟ್ಟೆ, ಲ್ಯಾಲ್ಸ್‌ ಡೌನ್‌ ಕಟ್ಟಡಗಳ ನೆಲಸಮಗೊಳಿಸುವ ಅವಶ್ಯಕತೆಯಿಲ್ಲ. ಚಾಮುಂಡಿ ಬೆಟ್ಟ ಸೇರಿದಂತೆ ಎಲ್ಲವನ್ನು ಸಂರಕ್ಷಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮೈಸೂರು-ಕೊಡಗು ಕ್ಷೇತ್ರ ಬಹಳ ವಿಶಾಲ ವ್ಯಾಪ್ತಿ ಹೊಂದಿದ್ದು, ತಳಮಟ್ಟದ ಸಮಸ್ಯೆ ತಿಳಿದು ಸ್ಪಂದಿಸಲು ಸಮಯ ಬೇಕಾಗುತ್ತದೆ. ನನ್ನದೇ ಆದ ಕೆಲವು ಯೋಜನೆಗಳಿದ್ದು, ಈ ಎರಡೂ ಕ್ಷೇತ್ರಗಳಲ್ಲಿಯೂ ಕೃಷಿ, ಪರಂಪರೆ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ಕೊಡಲು ಮೈಸೂರು ಅರಸರ ಸಿದ್ದಾಂತ, ಎನ್‌ಡಿಎ ಸಿದ್ದಾಂತ ಆಧಾರದ ಮೇಲೆ ಕೆಲಸ ಮಾಡಲಾಗುವುದು. ಬಹಳ ಜನರು ನನ್ನ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡು ಮತ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಶ್ರಮ ವಹಿಸುವುದಾಗಿ ಯದುವೀರ್‌ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago