ಮೈಸೂರು

ಕಾಂಗ್ರೆಸ್‌ ಒಕ್ಕಲಿಗ ವಿರೋಧಿ ಪಕ್ಷ: ಎಲ್‌.ನಾಗೇಂದ್ರ ಕಿಡಿ

ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್‌. ನಾಗೇಂದ್ರ ಹೇಳಿದ್ದಾರೆ.

ಮಾಜಿ ಮುಡಾ ಅಧ್ಯಕ್ಷ ಎಚ್‌.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಕೊಳ್ಳುತ್ತಿರುವ ಸಂಬಂಧ ಅವರು ಈರೀತಿಯ ಪ್ರತಿಕ್ರಿಯ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ಎಚ್‌.ವಿ ರಾಜೇಂದ್ರ ಅವರು ಪಕ್ಷ ತೊರೆಯುವುದರಿಂದ ನಮಗೆ ಯಾವುದೇ ತೊಂದರೆಯಿಲ್ಲ ಹಾಗೂ ಪಕ್ಷಕ್ಕೂ ಯಾವುದೇ ಡ್ಯಾಮೆಜ್‌ ಆಗುವುದಿಲ್ಲ ಎಂದು ತಿಳಿಸಿದರು.

ಅವರು ನಮ್ಮ ಪಕ್ಷಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಲಿಸುವ ಕೆಲಸ ನಾವು ಮಾಡುವುದಿಲ್ಲ. ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ವಿರುದ್ಧವಾಗಿ ಅವರು ಕೆಲಸ ಮಾಡಿದ್ದರು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ ಎಂದು ವಿವರಿಸಿದರು.

ಇನ್ನೂ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಲಕ್ಷ್ಮಣ್‌ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌ ಒಕ್ಕಲಿಗ ವಿರೋಧಿ ಪಕ್ಷವಾಗಿದೆ. ಒಕ್ಕಲಗರಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ 41 ವರ್ಷ ಸಮಯ ತೆಗೆದುಕೊಂಡಿದೆ. ಲಕ್ಷ್ಮಣ್‌ ಬಿಟ್ಟರೇ ಕಾಂಗ್ರೆಸ್‌ನಲ್ಲಿ ಬೇರಾರೂ ಇರಲಿಲ್ಲವಾ. ಇದಕ್ಕಿಂತ ಮುಂಚೆ ಯಾಕೆ ಕಾಂಗ್ರೆಸ್‌ ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

6 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

26 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

37 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

40 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

45 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

1 hour ago