ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್. ನಾಗೇಂದ್ರ ಹೇಳಿದ್ದಾರೆ.
ಮಾಜಿ ಮುಡಾ ಅಧ್ಯಕ್ಷ ಎಚ್.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಳ್ಳುತ್ತಿರುವ ಸಂಬಂಧ ಅವರು ಈರೀತಿಯ ಪ್ರತಿಕ್ರಿಯ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ಎಚ್.ವಿ ರಾಜೇಂದ್ರ ಅವರು ಪಕ್ಷ ತೊರೆಯುವುದರಿಂದ ನಮಗೆ ಯಾವುದೇ ತೊಂದರೆಯಿಲ್ಲ ಹಾಗೂ ಪಕ್ಷಕ್ಕೂ ಯಾವುದೇ ಡ್ಯಾಮೆಜ್ ಆಗುವುದಿಲ್ಲ ಎಂದು ತಿಳಿಸಿದರು.
ಅವರು ನಮ್ಮ ಪಕ್ಷಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಲಿಸುವ ಕೆಲಸ ನಾವು ಮಾಡುವುದಿಲ್ಲ. ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ವಿರುದ್ಧವಾಗಿ ಅವರು ಕೆಲಸ ಮಾಡಿದ್ದರು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ ಎಂದು ವಿವರಿಸಿದರು.
ಇನ್ನೂ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಒಕ್ಕಲಿಗ ವಿರೋಧಿ ಪಕ್ಷವಾಗಿದೆ. ಒಕ್ಕಲಗರಿಗೆ ಟಿಕೆಟ್ ನೀಡಲು ಕಾಂಗ್ರೆಸ್ 41 ವರ್ಷ ಸಮಯ ತೆಗೆದುಕೊಂಡಿದೆ. ಲಕ್ಷ್ಮಣ್ ಬಿಟ್ಟರೇ ಕಾಂಗ್ರೆಸ್ನಲ್ಲಿ ಬೇರಾರೂ ಇರಲಿಲ್ಲವಾ. ಇದಕ್ಕಿಂತ ಮುಂಚೆ ಯಾಕೆ ಕಾಂಗ್ರೆಸ್ ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…