ಮೈಸೂರು

ಕಾಂಗ್ರೆಸ್‌ ಒಕ್ಕಲಿಗ ವಿರೋಧಿ ಪಕ್ಷ: ಎಲ್‌.ನಾಗೇಂದ್ರ ಕಿಡಿ

ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್‌. ನಾಗೇಂದ್ರ ಹೇಳಿದ್ದಾರೆ.

ಮಾಜಿ ಮುಡಾ ಅಧ್ಯಕ್ಷ ಎಚ್‌.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಕೊಳ್ಳುತ್ತಿರುವ ಸಂಬಂಧ ಅವರು ಈರೀತಿಯ ಪ್ರತಿಕ್ರಿಯ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ಎಚ್‌.ವಿ ರಾಜೇಂದ್ರ ಅವರು ಪಕ್ಷ ತೊರೆಯುವುದರಿಂದ ನಮಗೆ ಯಾವುದೇ ತೊಂದರೆಯಿಲ್ಲ ಹಾಗೂ ಪಕ್ಷಕ್ಕೂ ಯಾವುದೇ ಡ್ಯಾಮೆಜ್‌ ಆಗುವುದಿಲ್ಲ ಎಂದು ತಿಳಿಸಿದರು.

ಅವರು ನಮ್ಮ ಪಕ್ಷಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಲಿಸುವ ಕೆಲಸ ನಾವು ಮಾಡುವುದಿಲ್ಲ. ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ವಿರುದ್ಧವಾಗಿ ಅವರು ಕೆಲಸ ಮಾಡಿದ್ದರು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ ಎಂದು ವಿವರಿಸಿದರು.

ಇನ್ನೂ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಲಕ್ಷ್ಮಣ್‌ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌ ಒಕ್ಕಲಿಗ ವಿರೋಧಿ ಪಕ್ಷವಾಗಿದೆ. ಒಕ್ಕಲಗರಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ 41 ವರ್ಷ ಸಮಯ ತೆಗೆದುಕೊಂಡಿದೆ. ಲಕ್ಷ್ಮಣ್‌ ಬಿಟ್ಟರೇ ಕಾಂಗ್ರೆಸ್‌ನಲ್ಲಿ ಬೇರಾರೂ ಇರಲಿಲ್ಲವಾ. ಇದಕ್ಕಿಂತ ಮುಂಚೆ ಯಾಕೆ ಕಾಂಗ್ರೆಸ್‌ ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

24 mins ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

32 mins ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

52 mins ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

3 hours ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

13 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

17 hours ago