ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್ ಶಿಪ್, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಸಮರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕಾಂಗ್ರೆಸ್ ಪ್ರಬುದ್ಧ ಯೋಜನೆಯನ್ನು ಸಹ ರದ್ದು ಮಾಡಿದೆ. ಹೀಗಾಗಿ ಕಾಂಗ್ರೆಸ್ ದಲಿತ ವಿರೋಧಿ ಸರ್ಕಾರವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ರೂಪಾಯಿ ದುರ್ಬಳಕೆಯಾಗಿರುವುದನ್ನು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹಣಕಾಸು ಸಚಿವರ ಗಮನಕ್ಕೆ ಬಾರದೆಯೇ ಇದೆಲ್ಲಾ ಸಾಧ್ಯವೇ ಎಂದು ಪ್ರಶ್ನಿಸಿದರು.
ಕೆಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಕುಟುಂಬ ಜಮೀನು ಖರೀದಿಸಿದ್ದು ಮೂಲತಃ ದಲಿತರದ್ದು. ನಿಂಗನ ವಾರಸುದಾರರಿಗೆ ಆ ಬದಲಿ ನಿವೇಶನಗಳು ಸೇರಬೇಕು ಎಂದು ಹೇಳಿದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…