ಮೈಸೂರು

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಎಂದರೆ ಏನು ಎಂದೇ ತಿಳಿದುಕೊಂಡಿಲ್ಲ. ಕಾಂಗ್ರೆಸ್‌ ಏ ಅಹಿಂದ. ಇವರೇನು ಅಹಿಂದ ಸಮಾವೇಶ ಮಾಡೋದು. ಕಾಂಗ್ರೆಸ್ ಪಕ್ಷಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಹಿರಿಯ ನಾಯಕರು ಸೊಲ್ಲೆತ್ತುತ್ತಿಲ್ಲ ಎಂದು ಛೇಡಿಸಿದರು.

ಇದನ್ನು ಓದಿ:ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಡಿ.ಕೆ.ಶಿವಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ , ಪಕ್ಷವನ್ನು ಕಟ್ಟಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು. ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯ ಇಲ್ಲ ಎಂಬಂತಾಗಬಾರದು ಎಂದು ಹೇಳಿದರು.

ಇನ್ನೂ ಅರಮನೆ ಉಳಿಸುವ ಸಂಬಂಧ ಮಾತನಾಡಿದ ಅವರು, ಅರಮನೆ ಉಳಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಮಂತ್ರಿಗಳು ಸಭೆ ಕರೆಯಬೇಕು. ಅರಮನೆ ಬಗ್ಗೆ ಆಸಕ್ತಿ ಹೊಂದಿರುವ ತಜ್ಞರು, ಪತ್ರಕರ್ತರನ್ನು ಒಳಗೊಂಡಂತೆ ಸಭೆನಡೆಯಬೇಕು. ಅರಮನೆ ನಿರ್ವಹಣೆಯ ರೂಪುರೇಷೆಗಳು ಅಲ್ಲಿ ಚರ್ಚೆಯಾಗಬೇಕು ಎಂದರು.

ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ನಿವೃತ್ತಿ ಹೊಂದುತ್ತಿದ್ದಾರೆ. ಆದರೆ ಅವರನ್ನು ಮೂರು ವರ್ಷಗಳ ಕಾಲ ಮುಂದುವರೆಸಲು ಹುನ್ನಾರ ನಡೆಯುತ್ತಿದೆ. ಇದಾಗಬಾರದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago