ಮೈಸೂರು

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಎಂದರೆ ಏನು ಎಂದೇ ತಿಳಿದುಕೊಂಡಿಲ್ಲ. ಕಾಂಗ್ರೆಸ್‌ ಏ ಅಹಿಂದ. ಇವರೇನು ಅಹಿಂದ ಸಮಾವೇಶ ಮಾಡೋದು. ಕಾಂಗ್ರೆಸ್ ಪಕ್ಷಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಹಿರಿಯ ನಾಯಕರು ಸೊಲ್ಲೆತ್ತುತ್ತಿಲ್ಲ ಎಂದು ಛೇಡಿಸಿದರು.

ಇದನ್ನು ಓದಿ:ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಡಿ.ಕೆ.ಶಿವಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ , ಪಕ್ಷವನ್ನು ಕಟ್ಟಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು. ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯ ಇಲ್ಲ ಎಂಬಂತಾಗಬಾರದು ಎಂದು ಹೇಳಿದರು.

ಇನ್ನೂ ಅರಮನೆ ಉಳಿಸುವ ಸಂಬಂಧ ಮಾತನಾಡಿದ ಅವರು, ಅರಮನೆ ಉಳಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಮಂತ್ರಿಗಳು ಸಭೆ ಕರೆಯಬೇಕು. ಅರಮನೆ ಬಗ್ಗೆ ಆಸಕ್ತಿ ಹೊಂದಿರುವ ತಜ್ಞರು, ಪತ್ರಕರ್ತರನ್ನು ಒಳಗೊಂಡಂತೆ ಸಭೆನಡೆಯಬೇಕು. ಅರಮನೆ ನಿರ್ವಹಣೆಯ ರೂಪುರೇಷೆಗಳು ಅಲ್ಲಿ ಚರ್ಚೆಯಾಗಬೇಕು ಎಂದರು.

ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ನಿವೃತ್ತಿ ಹೊಂದುತ್ತಿದ್ದಾರೆ. ಆದರೆ ಅವರನ್ನು ಮೂರು ವರ್ಷಗಳ ಕಾಲ ಮುಂದುವರೆಸಲು ಹುನ್ನಾರ ನಡೆಯುತ್ತಿದೆ. ಇದಾಗಬಾರದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago