ಮೈಸೂರು

ಸಿ.ಟಿ ರವಿಗೆ ಬಿಕೆ ಹರಿಪ್ರಸಾದ್ ಸವಾಲು

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಕೋತ್ವಾಲ್ ನ ಮೂಲವೇ ಚಿಕ್ಕಮಗಳೂರು, ಸಿ.ಟಿ ರವಿ ಕೋತ್ವಾಲ್ ನ ಸಂತತಿ.,ನಾನು ಗ್ರಾಮ ಪಂಚಾಯಿತಿ ಚುನಾವಣೆ ನಿಂತು ಗೆದ್ದಿಲ್ಲ ನಿಜಾ. ವಿಶ್ವಗುರು ಮೋದಿ ಯಾವ ಚುನಾವಣೆ ಗೆದ್ದು ಗುಜರಾತ್ ನ ಸಿಎಂ ಆಗಿದ್ದು? ಸಿಟಿ ರವಿ ಹಾಗೆ ನಾನು ಜಾತಿ, ಹಣ ಬಲದಿಂದ ಚುನಾವಣೆ ಎದುರಿಸುವ ಕ್ರಿಮಿನಲ್ ಅಲ್ಲ ಎಂದು ಸಿಟಿ ರವಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನ್ನ ಜೀವನದಲ್ಲಿ ಎಲ್ಲಾದ್ರೂ ಎಫ್ ಐ ಆರ್ ಆಗಿದ್ರೆ , ನಾನು ನನ್ನ ರಾಜಕೀಯ ಜೀವನವನ್ನೇ ಬಿಡ್ತೇನೆ. ಸಿಟಿ ರವಿ ಕೋಟ್ಯಾಧೀಶ, ಸಿ ಟಿ ರವಿ ಎಂ ಎಲ್ ಎ ಆದಾಗ ಎಷ್ಟು ದುಡ್ಡು ಇತ್ತು, ಇವಾಗ ಎಷ್ಟಿದೆ ಅಂತ ಲೆಕ್ಕ ಕೊಡ್ಲಿ ಎಂದು ಸವಾಲು ಹಾಕಿದರು.ಸಿ ಟಿ ರವಿ ಆಲ್ದಳ್ಳಿಯಿಂದ ಬಂದವರು. ಅವರು, ರಸ್ತೆ ಮೇಲೆ ಲಿಫ್ಟ್ ಗಾಗಿ ಕಾಯ್ತಿದ್ದ‌ ಕಾಲದಲ್ಲೇ ನನ್ನ ಬಳಿ ಸ್ಕೂಟರ್ ಇತ್ತು. ಅವರ ಭಾಷೆ ಅವರ ವ್ಯಕ್ತಿತ್ವವನ್ನು ತೋರಿಸುತ್ತೆ. ಕುಡಿದ ನಶೆಯಲ್ಲಿ ಕಾರ್ ಓಡಿಸಿ ಅಮಾಯಕ ಜನರನ್ನು ಕೊಂದವನಲ್ಲ ನಾನು. ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಏನು ಅಂತಾ ತುಂಬಾ ಚೆನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

andolana

Recent Posts

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ…

3 mins ago

ಮೈಸೂರು| ಜಮೀನು ಪರಿಶೀಲನೆಗೆ ತೆರಳಿದ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ: ಎಫ್‌ಐಆರ್‌ ದಾಖಲು

ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ…

38 mins ago

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ: ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ…

58 mins ago

ವಿಜೃಂಭಣೆಯಿಂದ ನಡೆದ ಸುತ್ತೂರಿನ ರಥೋತ್ಸವ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…

2 hours ago

ಮಂಡ್ಯ: 11 ತಿಂಗಳ ಬಂಡೂರು ಕುರಿ 1.35 ಲಕ್ಷಕ್ಕೆ ಮಾರಾಟ

ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…

3 hours ago

ರಾಜಣ್ಣ ಮನೆಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಪ್ಟನೆ

ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ…

3 hours ago