ಮೈಸೂರು

ಸಿ.ಟಿ ರವಿಗೆ ಬಿಕೆ ಹರಿಪ್ರಸಾದ್ ಸವಾಲು

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಕೋತ್ವಾಲ್ ನ ಮೂಲವೇ ಚಿಕ್ಕಮಗಳೂರು, ಸಿ.ಟಿ ರವಿ ಕೋತ್ವಾಲ್ ನ ಸಂತತಿ.,ನಾನು ಗ್ರಾಮ ಪಂಚಾಯಿತಿ ಚುನಾವಣೆ ನಿಂತು ಗೆದ್ದಿಲ್ಲ ನಿಜಾ. ವಿಶ್ವಗುರು ಮೋದಿ ಯಾವ ಚುನಾವಣೆ ಗೆದ್ದು ಗುಜರಾತ್ ನ ಸಿಎಂ ಆಗಿದ್ದು? ಸಿಟಿ ರವಿ ಹಾಗೆ ನಾನು ಜಾತಿ, ಹಣ ಬಲದಿಂದ ಚುನಾವಣೆ ಎದುರಿಸುವ ಕ್ರಿಮಿನಲ್ ಅಲ್ಲ ಎಂದು ಸಿಟಿ ರವಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನ್ನ ಜೀವನದಲ್ಲಿ ಎಲ್ಲಾದ್ರೂ ಎಫ್ ಐ ಆರ್ ಆಗಿದ್ರೆ , ನಾನು ನನ್ನ ರಾಜಕೀಯ ಜೀವನವನ್ನೇ ಬಿಡ್ತೇನೆ. ಸಿಟಿ ರವಿ ಕೋಟ್ಯಾಧೀಶ, ಸಿ ಟಿ ರವಿ ಎಂ ಎಲ್ ಎ ಆದಾಗ ಎಷ್ಟು ದುಡ್ಡು ಇತ್ತು, ಇವಾಗ ಎಷ್ಟಿದೆ ಅಂತ ಲೆಕ್ಕ ಕೊಡ್ಲಿ ಎಂದು ಸವಾಲು ಹಾಕಿದರು.ಸಿ ಟಿ ರವಿ ಆಲ್ದಳ್ಳಿಯಿಂದ ಬಂದವರು. ಅವರು, ರಸ್ತೆ ಮೇಲೆ ಲಿಫ್ಟ್ ಗಾಗಿ ಕಾಯ್ತಿದ್ದ‌ ಕಾಲದಲ್ಲೇ ನನ್ನ ಬಳಿ ಸ್ಕೂಟರ್ ಇತ್ತು. ಅವರ ಭಾಷೆ ಅವರ ವ್ಯಕ್ತಿತ್ವವನ್ನು ತೋರಿಸುತ್ತೆ. ಕುಡಿದ ನಶೆಯಲ್ಲಿ ಕಾರ್ ಓಡಿಸಿ ಅಮಾಯಕ ಜನರನ್ನು ಕೊಂದವನಲ್ಲ ನಾನು. ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಏನು ಅಂತಾ ತುಂಬಾ ಚೆನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

andolana

Recent Posts

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

15 mins ago

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

29 mins ago

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

2 hours ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

3 hours ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

5 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

6 hours ago