ಮೈಸೂರು

ಸಿ.ಟಿ ರವಿಗೆ ಬಿಕೆ ಹರಿಪ್ರಸಾದ್ ಸವಾಲು

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಕೋತ್ವಾಲ್ ನ ಮೂಲವೇ ಚಿಕ್ಕಮಗಳೂರು, ಸಿ.ಟಿ ರವಿ ಕೋತ್ವಾಲ್ ನ ಸಂತತಿ.,ನಾನು ಗ್ರಾಮ ಪಂಚಾಯಿತಿ ಚುನಾವಣೆ ನಿಂತು ಗೆದ್ದಿಲ್ಲ ನಿಜಾ. ವಿಶ್ವಗುರು ಮೋದಿ ಯಾವ ಚುನಾವಣೆ ಗೆದ್ದು ಗುಜರಾತ್ ನ ಸಿಎಂ ಆಗಿದ್ದು? ಸಿಟಿ ರವಿ ಹಾಗೆ ನಾನು ಜಾತಿ, ಹಣ ಬಲದಿಂದ ಚುನಾವಣೆ ಎದುರಿಸುವ ಕ್ರಿಮಿನಲ್ ಅಲ್ಲ ಎಂದು ಸಿಟಿ ರವಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನ್ನ ಜೀವನದಲ್ಲಿ ಎಲ್ಲಾದ್ರೂ ಎಫ್ ಐ ಆರ್ ಆಗಿದ್ರೆ , ನಾನು ನನ್ನ ರಾಜಕೀಯ ಜೀವನವನ್ನೇ ಬಿಡ್ತೇನೆ. ಸಿಟಿ ರವಿ ಕೋಟ್ಯಾಧೀಶ, ಸಿ ಟಿ ರವಿ ಎಂ ಎಲ್ ಎ ಆದಾಗ ಎಷ್ಟು ದುಡ್ಡು ಇತ್ತು, ಇವಾಗ ಎಷ್ಟಿದೆ ಅಂತ ಲೆಕ್ಕ ಕೊಡ್ಲಿ ಎಂದು ಸವಾಲು ಹಾಕಿದರು.ಸಿ ಟಿ ರವಿ ಆಲ್ದಳ್ಳಿಯಿಂದ ಬಂದವರು. ಅವರು, ರಸ್ತೆ ಮೇಲೆ ಲಿಫ್ಟ್ ಗಾಗಿ ಕಾಯ್ತಿದ್ದ‌ ಕಾಲದಲ್ಲೇ ನನ್ನ ಬಳಿ ಸ್ಕೂಟರ್ ಇತ್ತು. ಅವರ ಭಾಷೆ ಅವರ ವ್ಯಕ್ತಿತ್ವವನ್ನು ತೋರಿಸುತ್ತೆ. ಕುಡಿದ ನಶೆಯಲ್ಲಿ ಕಾರ್ ಓಡಿಸಿ ಅಮಾಯಕ ಜನರನ್ನು ಕೊಂದವನಲ್ಲ ನಾನು. ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಏನು ಅಂತಾ ತುಂಬಾ ಚೆನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

42 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

47 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

1 hour ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

14 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

16 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

19 hours ago